ಅಥಣಿ: ಪಂಚಮಸಾಲಿ ಸಮಾಜವನ್ನು ರಾಜ್ಯ ಸರ್ಕಾರವು 2ಎಗೆ ಹಾಗೂ ಕೇಂದ್ರ ಸರ್ಕಾರ ಒಬಿಸಿಗೆ ಸೇರಿಸಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಒತ್ತಾಯಿಸಿದ್ದಾರೆ.
'ಪಂಚಮಸಾಲಿ ಸಮಾಜವನ್ನು 2 ಎಗೆ ಸೇರಿಸಲು ಆಗ್ರಹಿಸಿ 28ಕ್ಕೆ ಸತ್ಯಾಗ್ರಹ' - Fasting in front of Belgaum Golden Mosque
ನಾವಿಲ್ಲಿ ಬೇರೆ ಯಾವ ಉದ್ದೇಶಕ್ಕೂ ಮೀಸಲಾತಿಯನ್ನು ಕೇಳುತ್ತಿಲ್ಲ. ಪಂಚಮಸಾಲಿ ಸಮಾಜದ ನ್ಯಾಯಯುತ ಹಕ್ಕನ್ನು ಕೇಳುತ್ತಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ತಿಳಿಸಿದ್ದಾರೆ.
!['ಪಂಚಮಸಾಲಿ ಸಮಾಜವನ್ನು 2 ಎಗೆ ಸೇರಿಸಲು ಆಗ್ರಹಿಸಿ 28ಕ್ಕೆ ಸತ್ಯಾಗ್ರಹ' Jayamritunjaya Sri insists on Panchamsali social reservation](https://etvbharatimages.akamaized.net/etvbharat/prod-images/768-512-9306447-203-9306447-1603620238042.jpg)
ಜಯಮೃತ್ಯುಂಜಯ ಶ್ರೀ
ಜಗದ್ಗುರು ಜಯಮೃತ್ಯುಂಜಯ ಶ್ರೀಗಳು
ತಾಲೂಕಿನಲ್ಲಿ ಮಾಧ್ಯಮದೊಂದಿಗೆ ಮಾಹಿತಿ ನೀಡಿದ ಅವರು, ಕರ್ನಾಟದಲ್ಲಿ ಅತಿ ಹೆಚ್ಚು ಪಂಚಮಸಾಲಿ ಸಮಾಜದವರು ವಾಸವಾಗಿದ್ದಾರೆ. ಹೀಗಾಗಿ, ಇವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅವಶ್ಯಕತೆಯಿದೆ. ಹಾಗಾಗಿ ಮೀಸಲಾತಿಗಾಗಿ ಒತ್ತಾಯಿಸಿ ಇದೇ 28ರಂದು ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದರು.
TAGGED:
Jagadguru Jayamritunjaya sri