ಕರ್ನಾಟಕ

karnataka

ETV Bharat / state

ರಾಮ‌ ಮಂದಿರ ನಿರ್ಮಾಣಕ್ಕೆ ಜ.15ರಿಂದ ನಿಧಿ ಸಮರ್ಪಣ ಅಭಿಯಾನ: ಕೇಶವ ಹೆಗಡೆ - ayodhye sri ramamandhir construction news

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಜ.15ರಿಂದ ಫೆ.27ರವರೆಗೆ 'ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ' ಹಮ್ಮಿಕೊಳ್ಳಲಾಗಿದೆ.

belagavi
ಬೆಳಗಾವಿಯಲ್ಲಿ ಸುದ್ದಿಗೋಷ್ಟಿ

By

Published : Jan 2, 2021, 3:57 PM IST

ಬೆಳಗಾವಿ:ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕಾಗಿ ಜ. 15ರಿಂದ ಫೆ.27ರವರೆಗೆ 'ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ' ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕ್ಷತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಟಿ
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷದ್ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ‌ ಸಂಘ ಸೇರಿದಂತೆ 35ಕ್ಕೂ ಹೆಚ್ಚಿನ ವಿವಿಧ ಸಂಘಟನೆಗಳ ಕಾರ್ಯಕರ್ತರು, ರಾಮಭಕ್ತರು, ಸಂತರು ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಇವರೆಲ್ಲರೂ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಿಗೆ ತೆರಳಿ ಶ್ರೀರಾಮ ಮಂದಿರದ ಸಂದೇಶವನ್ನು ಜನರಿಗೆ ತಿಳಿಸುತ್ತಾ ದೇಶದ ಪ್ರತಿಯೊಬ್ಬ ವ್ಯಕ್ತಿ ಶ್ರದ್ಧೆಯಿಂದ ನೀಡಿದ ಕಾಣಿಕೆ ಸಂಗ್ರಹಿಸಿ ಶ್ರೀರಾಮ‌ ಮಂದಿರದ ಟ್ರಸ್ಟ್​ಗೆ ಮುಟ್ಟಿಸುವ ಕೆಲಸ ಮಾಡಲಿದ್ದಾರೆ ಎಂದರು.

ಬೆಳಗಾವಿಯ 800, ಚಿಕ್ಕೋಡಿಯ 600 ಗ್ರಾಮಗಳಲ್ಲಿ ನೆಲೆಸಿರುವ ಹತ್ತು ಲಕ್ಷ ಕುಟುಂಬಗಳನ್ನು ಮಂದಿರ ನಿಧಿ ಸಮರ್ಪಣ ಕಾರ್ಯಕ್ರಮದ ಅಭಿಯಾನ ನಿಮಿತ್ತ ಸಂಪರ್ಕಿಸುವ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ ಎಲ್ಲ ಸಂತರು, ಮಠಾಧೀಶರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು. ಜನರಲ್ಲಿ ತ್ಯಾಗ ಮನೋಭಾವ, ಆಧ್ಯಾತ್ಮಿಕತೆ ಬರಬೇಕು. ರಾಮನ ವಿಚಾರಗಳು ಜನರನ್ನು ಮುಟ್ಟಬೇಕು. ಸಮಸ್ತ ಸಮಾಜ ಬಾಂಧವರು ರಾಮ ಮಂದಿರ ನಿರ್ಮಾಣಕ್ಕೆ ಸಹಕರಿಸಬೇಕು‌ ಎಂದು ಹೇಳಿದ್ರು.

10, 100, 1,000 ಮುದ್ರಿತವಾದ ಕೂಪನ್​ಗಳ ಸಹಾಯದಿಂದ ನಿಧಿ ಸಮರ್ಪಣೆ ನಡೆಯಲಿದೆ. 2 ಸಾವಿರ ರೂಗಳಿಗಿಂತ ಹೆಚ್ಚಿನ ಮೊತ್ತ ಕೊಡುವ ಭಕ್ತರಿಗೆ ರಸೀದಿ ನೀಡಲಾಗುತ್ತದೆ. ಅದಕ್ಕೂ ಹೆಚ್ಚಿನ‌ ಹಣ ಸಂದಾಯ ಮಾಡುವ ಭಕ್ತರು, ಚೆಕ್ ಮೂಲಕ ನೇರವಾಗಿ ಶ್ರೀರಾಮ ಜನ್ಮಭೂಮಿ ಟ್ರಸ್ಟ್​ಗೆ ಖಾತೆಗೆ ಜಮೆ ಮಾಡಬಹುದು ಎಂದು ತಿಳಿಸಿದ್ರು.

ಓದಿ:10 ಮಂದಿಯಲ್ಲಿ ರೂಪಾಂತರಿ ವೈರಸ್ ದೃಢ: ಸಚಿವ ಡಾ.ಕೆ.ಸುಧಾಕರ್

ABOUT THE AUTHOR

...view details