ಕರ್ನಾಟಕ

karnataka

By

Published : Aug 23, 2020, 12:51 PM IST

ETV Bharat / state

ತಗ್ಗಿದ ಮಳೆ: ಕೃಷ್ಣಾ ನದಿ ಒಳ ಹರಿವು ಇಳಿಮುಖ

ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸ್ಪಲ್ಪ ತಗ್ಗಿದ್ದು, ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳ ಹರಿವಿನಲ್ಲಿಯೂ ಇಳಿಮುಖ ಕಂಡಿದೆ.

chikkodi
ಕೃಷ್ಣಾ ನದಿ ಒಳ ಹರಿವು ಇಳಿಮುಖ

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಲ್ಲಿ ಇಳಿಮುಖ ಕಂಡಿದೆ. ಹೀಗಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳ ಹರಿವಿನಲ್ಲಿಯೂ ಇಳಿಮುಖ ಕಂಡಿದೆ.

ಕೃಷ್ಣಾ ನದಿ ಒಳ ಹರಿವು ಇಳಿಮುಖ ..

ಕೃಷ್ಣಾ ನದಿ ಒಳ ಹರಿವು 1,49,000 ಕ್ಯೂಸೆಕ್‌ಕ್ಕಿಂತ ಹೆಚ್ಚಿದೆ ಎಂದು ಚಿಕ್ಕೋಡಿ ತಹಶೀಲ್ದಾರ ಶುಭಾಸ ಸಂಪಗಾಂವಿ ಈಟಿವಿ ಭಾರತಗೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್​ನಿಂದ 1,23,750 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 25,344 ಕ್ಯೂಸೆಕ್ ನೀರು ಹೀಗೆ ಒಟ್ಟು 1,49,000 ಕ್ಯೂಸೆಕ್​ಗೂ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ.

ಮಹಾರಾಷ್ಟ್ರದ ಕೊಯ್ನಾ-57 ಮಿ.ಮೀ, ನವಜಾ-76 ಮಿ.ಮೀ, ಮಹಾಬಲೇಶ್ವರ-59 ಮಿ.ಮೀ, ವಾರಣಾ-27 ಮಿ.ಮೀ, ಕಾಳಮ್ಮವಾಡಿ-35 ಮಿ.ಮೀ, ರಾಧಾನಗರಿ -44 ಮಿ.ಮೀ, ಪಾಟಗಾಂವ-40 ಮಿ.ಮೀ ಮಳೆಯಾಗಿದ್ದು ವರದಿಯಾಗಿದೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಮತ್ತೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿರುವ ವರದಿಯಾಗಿದೆ.

ಸದ್ಯ ಕೊಯ್ನಾ ಜಲಾಶಯ 91%, ವಾರಣಾ ಜಲಾಶಯ 94%, ರಾಧಾನಗರಿ ಜಲಾಶಯ 99%, ಕಣೇರ ಜಲಾಶಯ 92%, ಧೂಮ ಜಲಾಶಯ 96%, ಪಾಟಗಾಂವ 100% ಧೂದಗಂಗಾ 96%, ತುಂಬಿದೆ. ಹಿಪ್ಪರಗಿ ಬ್ಯಾರೆಜ್‌ನಿಂದ 1,57,000 ಹಾಗೂ ಆಲಮಟ್ಟಿ ಜಲಾಶಯದಿಂದ 2,00,000 ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ.

ABOUT THE AUTHOR

...view details