ಕರ್ನಾಟಕ

karnataka

ETV Bharat / state

ಸಾಹುಕಾರ್​ಗೆ​ ಮುಳುವಾದ 'ಮರಾಠಿ'ಗರ ಹಕ್ಕು ವಿವಾದ: ಕರವೇ ಪ್ರತಿಭಟನೆ - Protest News In Belagavi

ಬೆಳಗಾವಿ, ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಗಡಿ ಕನ್ನಡಿಗರು ಮುಜುಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

KRV Protest Against To Sahukar
ಕರವೇ ಪ್ರತಿಭಟನೆ

By

Published : Jan 1, 2020, 9:14 AM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದು ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಕನ್ನಡಿಗರು ಮುಜುಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶ ನಡೆಸಿದ ಕಾರ್ಯಕರ್ತರು, ಬಳಿಕ ಚೆನ್ನಮ್ಮ‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ್​ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಶಾಸಕ ರಮೇಶ್​ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದ್ರು.

ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ

ಚೆನ್ನಮ್ಮ‌ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚುವ ಮೂಲಕ ಸಾಹುಕಾರ್​ ವಿರುದ್ಧ ಆಕ್ರೋಶ ಹೊರಹಾಕಿದರು. ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು ರಮೇಶ್​ ಹಿಂಪಡೆಯಬೇಕು ಹಾಗೂ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಹಾಜರಿದ್ದರು.

ABOUT THE AUTHOR

...view details