ಚಿಕ್ಕೋಡಿ: ಕುಡಚಿ ಶಾಸಕ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವಗೆ ಕೊರೊನಾ ಸೋಂಕು ತಗುಲಿದೆ.
ಕುಡಚಿ ಶಾಸಕ ರಾಜೀವಗೆ ಕೊರೊನಾ ದೃಢ - ಕುಡಚಿ ಶಾಸಕ ರಾಜೀವ ಕೊರೊನಾ ಸೊಂಕು ದೃಢ ಸುದ್ದಿ,
ಪರೀಕ್ಷೆ ವೇಳೆ ನನಗೆ ಕೊವೀಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕುಡಚಿ ಶಾಸಕ ಟ್ವೀಟ್ ಮಾಡುವ ತಿಳಿಸಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿದ್ದು, ನನ್ನ ಸಂಪರ್ಕಕ್ಕೆ ಬಂದವರು ಮತ್ತು ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಕುಡಚಿ ಶಾಸಕ ಪಿ.ರಾಜೀವ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಾನು ಕೋವಿಡ್ ಪರೀಕ್ಷೆಗೊಳಪಟ್ಟಾಗ ಪಾಸಿಟಿವ್ ಎಂದು ತಿಳಿದುಬಂದಿದೆ. ವೈದ್ಯರು ಕೊಟ್ಟ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಕ್ರಮಗಳೊಂದಿಗೆ ಸ್ವಗ್ರಹದ ಪ್ರತ್ಯೇಕ ಕೊಠಡಿಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಲು ವಿನಂತಿಸುತ್ತೇನೆ. ಕೋವಿಡ್ ಬಗ್ಗೆ ಭಯ ಬೇಡ. ಎಚ್ಚರಿಕೆ ಹಾಗೂ ಆತ್ಮವಿಶ್ವಾಸದಿಂದ ಕೊರೊನಾವನ್ನು ಎದುರಿಸಿ ಬೇಗನೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲು ನಿಸರ್ಗದಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.