ಕರ್ನಾಟಕ

karnataka

By

Published : Sep 18, 2019, 9:04 PM IST

ETV Bharat / state

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಇಡಿ ನೋಟಿಸ್: ಅಕ್ಕನ ಜತೆ ಚರ್ಚಿಸಿಲು ಸಹೋದರ ಬೆಂಗಳೂರಿಗೆ ದೌಡು

ಡಿಕೆಶಿ ಅಕೌಂಟ್ ನಿಂದ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಹೆಬ್ಬಾಳ್ಕರ್​ಗೆ ನೋಟಿಸ್ ಜಾರಿಗೊಳಿಸಿದೆ. ನಿನ್ನೆಯಿಂದ ಹೆಬ್ಬಾಳ್ಕರ್ ಕೂಡ ಬೆಂಗಳೂರಿನಲ್ಲಿದ್ದು, ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಅಕ್ಕನ ಜೊತೆ ಚರ್ಚಿಸಲು ಚೆನ್ನರಾಜ್ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಚೆನ್ನರಾಜ್

ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿದ್ದ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ದಿಢೀರ್​ನೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿಗೆ ಪ್ರಯಾಣ ಬೆಳಸಿದ ಚೆನ್ನರಾಜ್​

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಾಜಿ ಸಚಿವ ಡಿಕೆಶಿಗೆ ಸಂಬಂಧಿಸಿದ ಕೆಲ ಹಣಕಾಸಿನ ವ್ಯವಹಾರಗಳನ್ನು ಚೆನ್ನರಾಜ್ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಡಿಕೆಶಿ ಅಕೌಂಟ್ ನಿಂದ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಹೆಬ್ಬಾಳ್ಕರ್​ಗೆ ನೋಟಿಸ್ ಜಾರಿಗೊಳಿಸಿದೆ. ನಿನ್ನೆಯಿಂದ ಹೆಬ್ಬಾಳ್ಕರ್ ಕೂಡ ಬೆಂಗಳೂರಿನಲ್ಲಿದ್ದು, ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಚರ್ಚೆಗೆ ಚೆನ್ನರಾಜ್ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ‌ಸಂಬಂಧ ಜಿಲ್ಲೆಯ ಡಿಕೆಶಿ ಹಾಗೂ ಹೆಬ್ಬಾಳ್ಕರ್ ಆಪ್ತರಿಗೂ ಇಡಿ ನೋಟಿಸ್ ರವಾನಿಸಿದೆ ಎನ್ನಲಾಗುತ್ತಿದೆ.

ABOUT THE AUTHOR

...view details