ಕರ್ನಾಟಕ

karnataka

ETV Bharat / state

ಬೆಳಗಾವಿ: ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ

ಚೈತ್ರಾಲಯ ಟ್ರಸ್ಟ್ ಕಮಿಟಿ ಮತ್ತು 1008 ಮಹಾವೀರ ದಿಗಂಬರ ಜೈನ ಬಸದಿ ವ್ಯವಸ್ಥಾಪಕ‌ ಸಂಘ ನಡುವೆ ಬಸದಿ ಜೀರ್ಣೋದ್ಧಾರ ವಿಚಾರಕ್ಕೆ ಕಲಹವಾಗಿದ್ದು, ಮೂರ್ತಿಯನ್ನು ದೇವಾಲಯದ ಪ್ರಾಂಗಣದಲ್ಲಿ ತಂದಿಡಲಾಗಿದೆ.

By

Published : Apr 3, 2022, 9:21 PM IST

The Jain Mandir is uproariously upsetting
ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ

ಬೆಳಗಾವಿ:ತಾಲೂಕಿನ ಮಚ್ಛೆ ಗ್ರಾಮದಲ್ಲಿ ಪುರಾತನ ಕಾಲದ ಜೈನ ಮಂದಿರ. ಜೈನ ಮಂದಿರದ ಜೀರ್ಣೋದ್ಧಾರ ವಿಚಾರಕ್ಕೆ ಜೈನ ಸಮುದಾಯದ ಎರಡು ಪಂಗಡಗಳ ಮಧ್ಯೆ ಗಲಾಟೆ ಉಂಟಾಗಿದೆ. ಜೈನ ಮಂದಿರದಲ್ಲಿರುವ ಜಿನಬಿಂಬ ಉತ್ತಾಪನೆ ಮಾಡುವ ವೇಳೆ ಎರಡು ಪಂಗಡಗಳ ಸದಸ್ಯರ ಮಧ್ಯೆ ಘರ್ಷಣೆ ನಡೆದಿದ್ದು, ಮಂದಿರದಲ್ಲಿದ್ದ ಮೂರ್ತಿ ಆವರಣಕ್ಕೆ ಬಂದಿದೆ. ಮಚ್ಛೆ ಗ್ರಾಮದ 1008 ಭಗವಾನ್ ಮಹಾವೀರ ದಿಗಂಬರ ಜೈನ ಮಂದಿರ ಜೀರ್ಣೊದ್ಧಾರ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ‌.

ತೀರ್ಪಿನಂತೆ ಜೀರ್ಣೋದ್ಧಾರ: ಜೈನ ಮಂದಿರದಲ್ಲಿ ಎರಡು ಕಮೀಟಿಗಳಾಗಿವೆ. ಶ್ರೀ 1008 ಮಹಾವೀರ ದಿಗಂಬರ ಜೈನ ಬಸದಿ ವ್ಯವಸ್ಥಾಪಕ ಸಂಘ ಹಾಗೂ ಶ್ರೀ ಮಹಾವೀರ ಚೈತ್ರಾಲಯ ಟ್ರಸ್ಟ್ ಕಮಿಟಿ ಮಧ್ಯೆ ಹಲವು ವರ್ಷಗಳಿಂದ ಜಗಳವಿದ್ದು ಹೈಕೋರ್ಟ್‌ನಲ್ಲಿ ಕೇಸ್ ದಾಖಲಾಗಿ ಮಾರ್ಚ್ 31ರಂದು ವಿಚಾರಣೆ ಮುಕ್ತಾಯವಾಗಿದೆ. ಹೈಕೋರ್ಟ್‌ನಲ್ಲಿ ತೀರ್ಪು ತಮ್ಮ ಪರ ಬಂದಿದ್ದು, ಅದರಂತೆ ನಾವು ಜೀರ್ಣೋದ್ಧಾರ ಕಾರ್ಯ ನಡೆಸುತ್ತಿದ್ದೇವೆ. ಆದರೆ, ಇದಕ್ಕೆ ಬೋಗಸ್ ಕಮಿಟಿಯವರು ವಿರೋಧಿಸುತ್ತಿದ್ದಾರೆ ಎಂಬುದು 1008 ಮಹಾವೀರ ದಿಗಂಬರ ಜೈನ ಬಸದಿ ವ್ಯವಸ್ಥಾಪಕ‌ ಸಂಘದ ವಾದ.

ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ

ಮೂಲ ಕಮಿಟಿ:ಶ್ರೀ ಮಹಾವೀರ ಜೈನ್ ಚೈತ್ರಾಲಯ ಟ್ರಸ್ಟ್ ಕಮಿಟಿಯವರು ಹೇಳುವ ಪ್ರಕಾರ, ತಮ್ಮದೂ ಮೂಲ ಕಮಿಟಿ ಇದ್ದು 1956ರಲ್ಲಿ ರಜಿಸ್ಟ್ರೇಷನ್ ಆಗಿದೆ. 2013ರಲ್ಲಿ ಗೌಡರು ಮತ್ತು ರೈತರು ಅಂತಾ ಎರಡು ಪಾರ್ಟಿ ಆದವು. ಅವರು ಸೊಸೈಟಿ ರಿಜಿಸ್ಟ್ರೇಷನ್ ಮಾಡಿಕೊಂಡು ಬಸದಿ ನಮ್ಮದೇ ಅಂತಾ ಹೇಳಲು ಶುರು ಮಾಡಿದ್ದರು. ಟ್ರಸ್ಟಿ ಮೊಮ್ಮಗನ ಜತೆ ಸೇರಿ ನಾವು ಕಮಿಟಿ ಮಾಡಿದೆವು. ಅದಕ್ಕೆ ಅವರು ವಿರೋಧ ಮಾಡಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು ಎಂದು ತಿಳಿಸಿದರು.

ಕೋರ್ಟ್​ ತೀರ್ಪು ಇನ್ನೂ ಕೈಸೇರಿಲ್ಲ: ಮಾರ್ಚ್ 31ರಂದು ಹೈಕೋರ್ಟ್‌ನಲ್ಲಿ ಇದ್ದ ಕೇಸ್ ಮುಗಿದಿದ್ದು, ಏನು ತೀರ್ಪು ನೀಡಿದೆ ಅಂತಾ ಗೊತ್ತಿಲ್ಲ. ಆದ್ರೆ ತೀರ್ಪಿನ ಪ್ರತಿ ಸಿಗುವ ಮುನ್ನವೇ ನಿನ್ನೆ ರಾತ್ರಿ ಯಾರಿಗೂ ಗೊತ್ತಾಗದ ರೀತಿ ಮೂರ್ತಿ ಹೊರಗೆ ತೆಗೆದಿದ್ದಾರೆ‌. ಮೂರ್ತಿ ಬೇರೆಡೆ ತಗೆದುಕೊಂಡು ಹೋಗಲು ಯತ್ನಿಸಿದ್ದರು. ಅದನ್ನ ತಡೆ ಹಿಡಿದಿದ್ದು ಈಗ ಮೂರ್ತಿ ಆವರಣದಲ್ಲಿದೆ. ಸಮಾಜ ಸಣ್ಣದಿದ್ದು ಎಲ್ಲರೂ ಸೇರಿ ಬಸದಿ ಕಟ್ಟೋಣ ಅಂದರೆ ನಿಮ್ಮನ್ನ ನಾವು ಸೇರಿಸಲ್ಲ ಎಂದಿದ್ದಾರೆ ಎಂದು ಚೈತ್ರಾಲಯ ಟ್ರಸ್ಟ್ ಕಮಿಟಿ ಅಧ್ಯಕ್ಷ ಮಹಾವೀರ ಪಾಟೀಲ್ ತಿಳಿಸಿದ್ದಾರೆ.

ಜಮೀನಿಗಾಗಿ ಕಲಹ: ಮಚ್ಛೆ ಊರಲ್ಲಿದ್ದ 50 ಗುಂಟೆ ಜಮೀನನ್ನು ಗೌಡರು ತಮ್ಮ ಹೆಸರಿಗೆ ಮಾಡಿಕೊಂಡಿದ್ದು, ಆ ಜಮೀನು ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಓರ್ವ ವ್ಯಕ್ತಿ ಹಲವು ವರ್ಷಗಳ ಹಿಂದೆ ಬಸದಿಗೆ ಜಮೀನು ನೀಡಿದ್ದ. ಯಾರೂ ಬಸದಿ ಪೂಜೆ ಮಾಡುತ್ತಾರೋ ಆ ಜಮೀನಿನಲ್ಲಿ ಕೃಷಿ ಮಾಡಿ ಜೀವನ ಸಾಗಿಸಬೇಕೆಂದು ನಿಯಮ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ರಾಯಚೂರು : ಸ್ನೇಹಿತರೊಂದಿಗೆ ಕೃಷ್ಣಾ ನದಿಗೆ ಈಜಲು ಹೋದ ಇಬ್ಬರು ನೀರುಪಾಲು

ABOUT THE AUTHOR

...view details