ಅಥಣಿ: ಡಿಸಿಎಂ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಥಣಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಲಕ್ಷ್ಮಣ ಸವದಿ ಅವರ ಕಟೌಟ್ ನಿಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಲಕ್ಷ್ಮಣ ಸವದಿ ಕಟೌಟ್ - ಕಾಂಗ್ರೆಸ್ ಮುಖಂಡರು ಮಹೇಶ್ ಕುಮ್ಟಳ್ಳಿ ಅವರ ಕಾಲ್ ಎಳೆಯುತ್ತಿದ್ದಾರೆ
ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಡಿಸಿಎಂ ಲಕ್ಷ್ಮಣ ಸವದಿ ಅಥಣಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಲಕ್ಷ್ಮಣ ಸವದಿ ಅವರ ಕಟೌಟ್ ನಿಲ್ಲಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
![ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಲಕ್ಷ್ಮಣ ಸವದಿ ಕಟೌಟ್ Laxman Savadi cutout for discussion](https://etvbharatimages.akamaized.net/etvbharat/prod-images/768-512-6141288-thumbnail-3x2-ath.jpg)
ಚರ್ಚೆಗೆ ಗ್ರಾಸವಾದ ಲಕ್ಷ್ಮಣ್ ಸವದಿ ಕಟೌಟ್
ಅಥಣಿಯ ಪ್ರಮುಖ ರಸ್ತೆಗಳಲ್ಲಿ ಅವರಿಗೆ ಸ್ವಾಗತ ಬಯಸುವ ನಿಟ್ಟಿನಲ್ಲಿ ಪೋಸ್ಟರ್ ಹಾಕಿ, ಅದರಲ್ಲಿ 'ಅಂತ್ಯವಲ್ಲ ಆರಂಭ' ಎಂದು ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ.
ಚರ್ಚೆಗೆ ಗ್ರಾಸವಾದ ಲಕ್ಷ್ಮಣ ಸವದಿ ಕಟೌಟ್
ಈ ಪೋಸ್ಟರ್ ಕಾಣುತ್ತಿದ್ದಂತೆ ಅಥಣಿ ಕಾಂಗ್ರೆಸ್ ಮುಖಂಡರು ಮಹೇಶ್ ಕುಮಟಳ್ಳಿ ಅವರ ಕಾಲೆಳೆಯುತ್ತಿದ್ದಾರೆ. ಮಹೇಶ್ ಅಣ್ಣ ಹುಷಾರು, ಡಿಸಿಎಂ ಲಕ್ಷ್ಮಣ ಸವದಿ ನಿಮಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಿಚಾಯಿಸುತ್ತಿದ್ದಾರೆ.