ಬೆಳಗಾವಿ:ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಆರೋಪ ಮಾಡುತ್ತಿವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ - ರಾಜಕೀಯ ಲೇಪನ
ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಆರೋಪ ಮಾಡುತ್ತಿವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
![ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ](https://etvbharatimages.akamaized.net/etvbharat/prod-images/768-512-4739216-thumbnail-3x2-sanju.jpg)
ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
ಪರಮೇಶ್ವರ್ ಪಿಎ ಸಾವಿಗೆ ಐಟಿ ದಾಳಿ ಕಾರಣ ಅಲ್ಲ;
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಪಿಎ ಸಾವಿಗೆ ಐಟಿ ದಾಳಿ ಕಾರಣ ಅಲ್ಲ. ಪರಮೇಶ್ವರ್ ಅವರೇ ಇದು ರಾಜಕೀಯ ದಾಳಿ ಅಲ್ಲ ಎಂದು ಹೇಳಿದ್ದಾರೆ. ಅವರ ಪಿಎ ಸಾವಿನ ತನಿಖೆ ಮಾಡಬೇಕೆಂದು ಕೋರಿದರೆ ಸರ್ಕಾರ ತನಿಖೆ ಮಾಡುತ್ತದೆ ಎಂದರು. ಇನ್ನು ಅಧಿವೇಶನದಿಂದ ಮಾಧ್ಯಮಗಳನ್ನು ಹೊರಗಿಟ್ಟ ವಿಚಾರವಾಗಿ, ಇದು ಸ್ಪೀಕರ್ ಅವರ ವೈಯಕ್ತಿಕ ತೀರ್ಮಾನ. ಅದನ್ನು ಪ್ರಶ್ನೆ ಮಾಡುವ ಹಕ್ಕು ನಮಗೆ ಇಲ್ಲ. ಉಳಿದಂತೆ ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮ ನಿರಾಕರಣೆ ವಿಷಯ ತಿಳಿದಿಲ್ಲ ಎಂದರು.