ಕರ್ನಾಟಕ

karnataka

ETV Bharat / state

ಬಿಜೆಪಿಯ ಜಾತಿ, ಧರ್ಮದ ರಾಜಕಾರಣಕ್ಕೆ ಜನ ಬೇಸತ್ತಿದ್ದಾರೆ: ಮಧು ಬಂಗಾರಪ್ಪ - ಧರ್ಮದ ರಾಜಕಾರಣ

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರ ಹಾಗೆ 300 ಭರವಸೆಗಳನ್ನು ನೀಡಿ 30 ಭರವಸೆ ಈಡೇರಿಸಲ್ಲ ಎಂದು ಮಧು ಬಂಗಾರಪ್ಪ ಟೀಕಿಸಿದರು.

Madhu Bangarappa Slams Bjp
ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ

By

Published : Dec 13, 2022, 6:22 PM IST

ಬೆಳಗಾವಿ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಓಬಿಸಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಕಾಂಗ್ರೆಸ್‌ ಓಬಿಸಿ ಘಟಕದ ನೂತನ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಓಬಿಸಿ ಘಟಕದ ಅಧ್ಯಕ್ಷನಾದ ನಂತರ ರಾಜ್ಯ ಸುತ್ತಿ ಪಕ್ಷ ಸಂಘಟನೆ ಮಾಡುವ ಕಾರ್ಯ ಮಾಡುತ್ತಿದ್ದೇನೆ. ಇದಕ್ಕೆ ಪೂರಕವಾಗಿ ಜಿಲ್ಲೆಯಾದ್ಯಂತ ಓಬಿಸಿ ಸಮಾವೇಶಗಳನ್ನು ನಡೆಸಲಾಗುವುದು ಎಂದರು.

ಚುನಾವಣೆಯಲ್ಲಿ ಮತಗಳನ್ನು ಗಮನಿಸಿದಾಗ ಶೇ.52 ರಿಂದ 58 ರಷ್ಟು ಮತಗಳು ಓಬಿಸಿ ಅವರದ್ದೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರದ ಪ್ರವಾಸ ಮಾಡಿದ್ದೇನೆ. ಈಗ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಓಬಿಸಿ ಸಮುದಾಯವನ್ನು ಒಗ್ಗೂಡಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ವಿಶೇಷವಾಗಿ ಹಿಂದುಳಿದ ಜನರ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸುತ್ತದೆ. ಅದೇ ಬಿಜೆಪಿ ಜಾತಿ ಧರ್ಮದ ಮೇಲೆ ರಾಜಕಾರಣ ಮಾಡುತ್ತದೆ. ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ತಂದೆ ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದೇನೆ. ಅವರು ಸಿಎಂ ಆಗಿದ್ದಾಗ ರೈತರ ಪಂಪ್‌ಸೆಟ್​​ಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಿದರು. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ವಿದ್ಯುತ್ ಖಾಸಗೀಕರಣಗೊಳಿಸಿ ರೈತರಿಗೆ ಕೊಡುವ ಉಚಿತ ವಿದ್ಯುತ್ ಅನ್ನು ಹೊಡೆಯುವ ಹುನ್ನಾರ ನಡೆಸಿದ್ದಾರೆ. ಕಿಸಾನ್ ಸಮ್ಮಾನ್​​ ಯೋಜನೆ ಹೆಸರಿನಲ್ಲಿ ರೈತರಿಗೆ ಎಕರೆಗೆ 6,000 ಹಣ ಕೊಟ್ಟು ಬೇರೆಡೆಯಿಂದ 60,000 ಹಣ ಪಡೆದಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ 2023ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು, ಕಾಂಗ್ರೆಸ್‌ ಪಕ್ಷದಿಂದ ಜಿಲ್ಲಾವಾರು ಪ್ರಣಾಳಿಕೆ ಸಿದ್ದಪಡಿಸಲಾಗುತ್ತಿದೆ. ಈಚೆಗೆ ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು 10 ಅಂಶಗಳನ್ನು ಆ ಭಾಗದ ಜನರಿಗಾಗಿ ಜಾರಿಗೆ ತರುವುದಾಗಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರ ಹಾಗೆ 300 ಭರವಸೆಗಳನ್ನು ನೀಡಿ 30 ಭರವಸೆ ಈಡೇರಿಸಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಮುಧೋಳ ಕೊಲೆ ಕೇಸ್: ತಂದೆಯನ್ನು ಕೊಂದು ನಾಲ್ಕು ದಿನದ ಬಳಿಕ ವಿಷಯ ತಿಳಿಸಿದ ಪುತ್ರ

ABOUT THE AUTHOR

...view details