ಕರ್ನಾಟಕ

karnataka

ಮತ್ತೆ ಗಡಿಯ ಕಿಡಿ ಹೊತ್ತಿಸಲು 'ಮಹಾ' ಸರ್ಕಾರದ ಹುನ್ನಾರ: ಇಂದು ವಿವಾದಿತ ಪುಸ್ತಕ ಬಿಡುಗಡೆ ಮಾಡಲಿರುವ ಉದ್ಧವ್ ಠಾಕ್ರೆ

By

Published : Jan 27, 2021, 10:38 AM IST

ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ‌ಉದ್ಧವ್ ಠಾಕ್ರೆ ಅವರು ಮುಂಬೈನಲ್ಲಿ 'ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ' ಎಂಬೆಸರಿನ ಪುಸ್ತಕವನ್ನು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ಗಡಿಯ ಕಿಡಿ ಹೊತ್ತಿಸಲು ಮುಂದಾಗಿದೆ.

Uddhav Thackeray
ಉದ್ಧವ್ ಠಾಕ್ರೆ

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದ ವಿವಾದಿತ ಪುಸ್ತಕ ಇಂದು ಬಿಡುಗಡೆಯಾಗಲಿದ್ದು, ಮಹಾರಾಷ್ಟ್ರ ಸರ್ಕಾರ ಮತ್ತೆ ಗಡಿಯ ಕಿಡಿ ಹೊತ್ತಿಸಲು ಮುಂದಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ‌ಉದ್ಧವ್ ಠಾಕ್ರೆ ಗಡಿ ವಿವಾದ ಕುರಿತಾದ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. 'ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ' ಎಂಬೆಸರಿನ ಪುಸ್ತಕವನ್ನು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಸಿಎಂ ಉದ್ಧವ್ ಠಾಕ್ರೆ ಬಿಡುಗಡೆ ಮಾಡಲಿದ್ದಾರೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಸೇರಿ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಓದಿ: ಚಿನ್ನಮ್ಮನ ಬಿಡುಗಡೆಗೆ ಪರಪ್ಪನ ಅಗ್ರಹಾರದಲ್ಲಿ ಸಕಲ ಸಿದ್ಧತೆ

1956 ರಿಂದ 2021ರವರೆಗಿನ ಗಡಿ ವಿವಾದ ಘಟನಾವಳಿಗಳು, ಮಹಾರಾಷ್ಟ್ರದ ನಿಲುವುಗಳ ಬಗ್ಗೆ ಒಳಗೊಂಡ ಲೇಖನಗಳ ಪುಸ್ತಕ ಇದಾಗಿದೆ. ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ 2004ರಿಂದಲೂ ಸುಪ್ರೀಂ ಕೋರ್ಟ್‌ನಲ್ಲಿದೆ. ವಿವಾದಿತ ಪುಸ್ತಕದಲ್ಲಿ ಮಹಾರಾಷ್ಟ್ರದ ಮೊಂಡ ಹಾಗೂ ಬಂಡ ವಾದಗಳಿರುವ ಸಾಧ್ಯತೆಯಿದೆ. ಪುಸ್ತಕದಲ್ಲಿನ ಅಂಶಗಳಿಂದ ಉಭಯ ರಾಜ್ಯಗಳ ಮಧ್ಯೆ ಮತ್ತೆ ಸಂಘರ್ಷದ ಕಿಡಿ ಹೊತ್ತುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಈ ಬೆಳವಣಿಗೆ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.

ABOUT THE AUTHOR

...view details