ಕರ್ನಾಟಕ

karnataka

By

Published : Dec 24, 2019, 8:22 AM IST

ETV Bharat / state

ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿ ನಿಪ್ಪಾಣಿಯಲ್ಲಿ ಅರೆಸ್ಟ್​ ​

ಅಬಕಾರಿ ಇಲಾಖೆಯ ಚಿಕ್ಕೋಡಿ ಉಪವಿಭಾಗದ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 50 ಸಾವಿರ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ ಘಟನೆ ನಿಪ್ಪಾಣಿ ನಗರದಲ್ಲಿ ನಡೆದಿದೆ.

ವ್ಯಕ್ತಿಯ ಬಂಧನ
ವ್ಯಕ್ತಿಯ ಬಂಧನ

ಚಿಕ್ಕೋಡಿ: ಅಬಕಾರಿ ಇಲಾಖೆಯ ಚಿಕ್ಕೋಡಿ ಉಪವಿಭಾಗದ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 50 ಸಾವಿರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸಿರುವ ಪ್ರಕರಣ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ್​ನ ಲಕ್ಷ್ಮಣ್​ ಬಾಳು ಚವ್ಹಾಣ್​ ಬಂಧಿತ. ಈತ ಗೋವಾದಿಂದ ಕೊಲ್ಲಾಪುರಕ್ಕೆ ಕಾರಿನಲ್ಲಿ ಮದ್ಯ ಸಾಗಿಸುವಾಗ ನಗರ ಹೊರವಲಯದಲ್ಲಿರುವ ಅಮರ್ ಹೋಟೆಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಬಕಾರಿ ಇಲಾಖೆ ಪೊಲೀಸರು ದಾಳಿ ನಡೆಸಿದ್ದಾರೆ.

ಸುಮಾರು 53 ಲೀಟರ್​ಗಳ 6 ಬಾಕ್ಸ್​ಗಳು ಮತ್ತು12 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಅಬಕಾರಿ ಡಿಎಸ್‍ಪಿ ವಿಜಯಕುಮಾರ ಹಿರೇಮಠ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಇನ್ಸ್​ಪೆಕ್ಟರ್ ಬಸವರಾಜ ಕರಮಣ್ಣವರ, ಸಬ್‍ ಇನ್ಸ್​ಪೆಕ್ಟರ್ ಸುರೇಂದ್ರ ಅರಗಲ್, ಶಾಂತಾರಾಮ ಹೆಗಡೆ, ಸಿಬ್ಬಂದಿ ಹಸನಸಾಬ ನದಾಫ್, ರಾಜು ಅಂಬಾರಿ, ಸಯ್ಯದ್ ಫಯಾಜ್ ಪಾಲ್ಗೊಂಡಿದ್ದರು.

ABOUT THE AUTHOR

...view details