ಕರ್ನಾಟಕ

karnataka

By

Published : May 27, 2020, 1:39 PM IST

ETV Bharat / state

ಕೌಟುಂಬಿಕ ಕಲಹ: ಪಿಗ್ಮಿ ಏಜೆಂಟ್‌ ಆತ್ಮಹತ್ಯೆ

ಕೌಟುಂಬಿಕ ಕಲಹದೊಂದಿಗೆ ಮಾನಸಿಕವಾಗಿ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

Mental illness Committed suicide  in kagavada
ಮಾನಸಿಕ ಅಸ್ವಸ್ಥ ಪಿಗ್ಮಿ ಏಜೆಂಟ್‌ ಆತ್ಮಹತ್ಯೆ

ಚಿಕ್ಕೋಡಿ: ಮಾನಸಿಕವಾಗಿ ಅಸ್ವಸ್ಥಗೊಂಡ ಪಿಗ್ಮಿ ಏಜೆಂಟ್​ನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಐನಾಪೂರ ಪಟ್ಟಣದ ಸಿದ್ದಪ್ಪ ನರಸಪ್ಪ ಹುದ್ದಾರ(51) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದೊಂದಿಗೆ ಮಾನಸಿಕವಾಗಿ ಅಸ್ವಸ್ಥಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

ಈತ ಹಲವು ವರ್ಷಗಳಿಂದ ಐನಾಪೂರ ಪಟ್ಟಣದ ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯಲ್ಲಿ ಪಿಗ್ಮಿ ಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details