ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಹಣ ಹಂಚಿಕೆ ಮಾಡಿದ್ದಾಗಿ ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಬಿಜೆಪಿ ನಾಯಕರ ಆರೋಪ ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂದು ಹೇಳಲು ಬಯಸುತ್ತೇನೆ. ಚುನಾವಣೆಯಲ್ಲಿ ಹಣ, ಹೆಂಡ ಹಂಚಿರುವ ಬಗ್ಗೆ ಬಿಜೆಪಿ ಆರೋಪ ಮಾಡುತ್ತಿದೆ.
ಆದರೆ ಬಿಜೆಪಿ ನಾಯಕರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಲು ಶಾಸಕ ವಿಶ್ವನಾಥ ಮನೆಗೆ ಹೋಗಿ 5 ಕೋಟಿ ರೂ ಆಮಿಷ ಒಡ್ಡಿದ್ದರು. ವಿಧಾನಸಭೆ ಅಧಿವೇಶನದಲ್ಲಿ ವೇಳೆ ಜೆಡಿಎಸ್ ಶಾಸಕ ಶ್ರೀನಿವಾಸ್ ಅವರೇ ತಿಳಿಸಿದ್ದಾರೆ. ಅಧಿಕಾರಕ್ಕಾಗಿ ಹಣ ಖರ್ಚು ಮಾಡಿದವರು ಬಿಜೆಪಿಗರು. ಕುದುರೆ ವ್ಯಾಪಾರ ಮಾಡಿ ಸರ್ಕಾರ ಮಾಡಿದ್ದಾರೆ. ಅವರೇ ಈಗ ಈ ರೀತಿ ಆರೋಪ ಮಾಡುತ್ತಿರುವುದು ಬಾಲಿಶ ಅನಿಸುತ್ತದೆ ಎಂದರು.