ಕರ್ನಾಟಕ

karnataka

ETV Bharat / state

ಸಚಿವಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಷಯ:ಸಚಿವ ಜಾರಕಿಹೊಳಿ

ಸಂಪುಟ ವಿಸ್ತರಣೆ ವೇಳೆ ಎಲ್ಲರಿಗೂ ಅವಕಾಶ ನೀಡುವುದು ಸಾಧ್ಯವಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ ಸಮರ್ಥರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

By

Published : Jun 9, 2019, 7:44 PM IST

ಸಂಪುಟ ವಿಸ್ತರಣೆ ವೇಳೆ ಎಲ್ಲರಿಗೂ ಅವಕಾಶ ನೀಡುವುದು ಸಾಧ್ಯವಿಲ್ಲ

ಬೆಳಗಾವಿ : ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಸಮರ್ಥರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದಲ್ಲಿ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಡೆದ ಸಸ್ಯ ಸಂತೆ ಉದ್ಘಾಟನೆ ಮಾಡಿ ಮಾತನಾಡಿದ ಸಚಿವರು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ ಸಮರ್ಥರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದರು. ಇದೇ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಯಾವುದೇ ಸಚಿವಸ್ಥಾನದ ಆಕಾಂಕ್ಷಿಗಳು ಇಲ್ಲ ಎಂದರು.

ಸಂಪುಟ ವಿಸ್ತರಣೆ ವೇಳೆ ಎಲ್ಲರಿಗೂ ಅವಕಾಶ ನೀಡುವುದು ಸಾಧ್ಯವಿಲ್ಲ

ಬೆಳಗಾವಿಯ ಹಲಗಾ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಭೂಮಿ ನೀಡಲು ರೈತರು ವಿರೋಧಿಸುತ್ತಿದ್ದಾರೆ. ಆದರೆ ಭೂಮಿ ನೀಡುವ ರೈತರಿಗೆ 13 ಲಕ್ಷಕ್ಕಿಂತ ಅಧಿಕ ಪರಿಹಾರ ನೀಡಲಾಗುತ್ತದೆ. ಇದರಿಂದ ರೈತರಿಗೆ ಸಹಾಯವಾಗಲಿದೆ ಎಂದರು. ಸುವರ್ಣ ಸೌಧ ನಿರ್ಮಿಸಲು ರೈತರಿಂದ ತೆಗೆದುಕೊಂಡ ಭೂಮಿಗೆ 13 ಲಕ್ಷ ಪರಿಹಾರ ನೀಡಲಾಗಿತ್ತು. ಈಗ ಅದಕ್ಕಿಂತ ಮೇಲ್ಪಟ್ಟು ಪರಿಹಾರ ನೀಡುವ ಭರವಸೆ ನೀಡಲಾಗುವುದು ಎಂದರು.

ABOUT THE AUTHOR

...view details