ಚಿಕ್ಕೋಡಿ (ಬೆಳಗಾವಿ): ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸಂಬಂಧ ಸದ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ರಾಯಣ್ಣ-ಶಿವಾಜಿ ಇಬ್ಬರೂ ಈ ದೇಶದ ಆಸ್ತಿ: ಸಚಿವ ರಮೇಶ್ ಜಾರಕಿಹೊಳಿ - ಮಹಾರಾಷ್ಟ್ರ ಏಕೀಕರಣ ಸಮಿತಿ
ಗಲಾಟೆಯ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್ ಆಗಿದ್ದು ನಿಜ. ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಜಾರಕಿಹೊಳಿ ಹೇಳಿದರು.
![ರಾಯಣ್ಣ-ಶಿವಾಜಿ ಇಬ್ಬರೂ ಈ ದೇಶದ ಆಸ್ತಿ: ಸಚಿವ ರಮೇಶ್ ಜಾರಕಿಹೊಳಿ Rayanna and Shivaji are the property of this country:](https://etvbharatimages.akamaized.net/etvbharat/prod-images/768-512-8589031-thumbnail-3x2-bgm.jpg)
ರಾಯಣ್ಣ, ಶಿವಾಜಿ ಇಬ್ಬರೂ ಈ ದೇಶದ ಆಸ್ತಿ: ಸಚಿವ ರಮೇಶ್ ಜಾರಕಿಹೊಳಿ
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ
ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯಿಸಿದ ಅವರು, ರಾಯಣ್ಣ ಹಾಗೂ ಶಿವಾಜಿ ಇಬ್ಬರೂ ಈ ದೇಶದ ಆಸ್ತಿ. ಅವರನ್ನು ಯಾವ ಜಾತಿಗೂ ಸೀಮಿತ ಮಾಡುವುದಿಲ್ಲ. ಅವರಿಗೆ ಯಾವುದೇ ಅಪಮಾನ ಆಗದ ರೀತಿಯಲ್ಲಿ ಗೊಂದಲ ಪರಿಹರಿಸುತ್ತೇವೆ ಎಂದರು.
ಅಲ್ಲದೆ ಈ ಗಲಾಟೆಯ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್ ಆಗಿದ್ದು ನಿಜ. ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಜಾರಕಿಹೊಳಿ ಹೇಳಿದರು.