ಕರ್ನಾಟಕ

karnataka

ETV Bharat / state

ಯಾವುದಕ್ಕೂ ಇರಲೆಂದು ಪದೇಪದೆ ಸಿಎಂ ಕುರ್ಚಿಗೆ ಟವೆಲ್ ಹಾಕ್ತಿರುವ ಸಚಿವ ಕತ್ತಿ.. ಇವತ್ತು ಹೀಗಂದರು.. - ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಉಮೇಶ ಕತ್ತಿ‌ ಹೇಳಿಕೆ ಸುದ್ದಿ

ಯಾವುದೇ ರೀತಿಯ ಬ್ಲ್ಯಾಕ್ ಸ್ಪಾಟ್​ ನನ್ನಲ್ಲಿ ಇಲ್ಲ, ಕಳಂಕರಹಿತ ವ್ಯಕ್ತಿತ್ವ ಇದೆ. ರಾಜ್ಯದ ಜನ ಆಶೀರ್ವದಿಸಿದ್ರೆ, ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದ್ರೆ ನಾನು ಸಿಎಂ ಆಗುವ ಆಸೆ ಉಳ್ಳವನು. ಪಕ್ಷ ಮನಸ್ಸು ಮಾಡಿದ್ರೆ ರಾಜ್ಯದ ಸಿಎಂ ಆಗಬೇಕೆಂದು ಮನಸು ಮಾಡಿದ್ದೇನೆ. ಆದ್ರೆ, ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ..

"ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಆದ್ರೆ ನೆಕ್ಸ್ಟ್ ನಾನೇ ಇದೀನಿ"
"ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಆದ್ರೆ ನೆಕ್ಸ್ಟ್ ನಾನೇ ಇದೀನಿ"

By

Published : Jul 19, 2021, 5:17 PM IST

Updated : Jul 19, 2021, 10:57 PM IST

ಬೆಳಗಾವಿ :ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಆದ್ರೆ ನೆಕ್ಸ್ಟ್ ನಾನೇ ಇದೀನಿ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ‌ ಮತ್ತೊಂದು ಬಾರಿ ಸಿಎಂ ಆಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಖಾಲಿ ಆದ್ರೆ ನೆಕ್ಸ್ಟ್‌ ನಾನೇ ಇದೀನಿ. ಸಿಎಂ ಸ್ಥಾನ ಬದಲಾವಣೆಯಾದ್ರೆ ನಂದೇ ನಂಬರ್ ಇದೆ ಎಂದರು.

ಸಚಿವ ಉಮೇಶ ಕತ್ತಿ‌

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕರೆದ ಸಂಘಟನಾತ್ಮಕ ಸಭೆಗೆ ಬಂದಿದ್ದೇನೆ. ರಾಜ್ಯದಲ್ಲಿ ಸಿಎಂ ಇದ್ದಾರೆ. ಇದೇ ಒಳ್ಳೆಯ ಸರ್ಕಾರ ನಡೀತಿದೆ. ಕಳೆದ ವರ್ಷದಿಂದ ಸಿಎಂ ಬದಲಾವಣೆ ಕೂಗು ಇದ್ದೇ ಇದೆ. ಅದು ಯಾರು ಬದಲಾಯಿಸುತ್ತಿದ್ದಾರೋ ನನ್ನ ಗಮನಕ್ಕೆ ಬಂದಿಲ್ಲ. ಹುಕ್ಕೇರಿ ಮತಕ್ಷೇತ್ರದ ಜನ 8 ಬಾರಿ ಶಾಸಕನಾಗಿ ಮಾಡಿ ಆಶೀರ್ವಾದ ಮಾಡಿದ್ದಾರೆ. ಎಂಟು ಬಾರಿ ಶಾಸಕನಾದ ಮೇಲೆ ಮಂತ್ರಿ ಆಗಬೇಕೆಂಬ ಆಸೆ ಇತ್ತು. ನಾಲ್ಕು ಬಾರಿ ರಾಜ್ಯದ ಮಂತ್ರಿಯಾಗಿ ನಾನು ಕೆಲಸ ಮಾಡಿದ್ದೇನೆ. ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲಾ ಯೋಗ್ಯತೆಗಳು ನನ್ನಲ್ಲಿವೆ ಎಂದರು.

ಓದಿ:ಸಿಎಂ ಬದಲಾವಣೆಯಾದ್ರೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿ: ಎನ್​.ಹೆಚ್​.ಕೋನರೆಡ್ಡಿ

ಯಾವುದೇ ರೀತಿಯ ಬ್ಲ್ಯಾಕ್ ಸ್ಪಾಟ್​ ನನ್ನಲ್ಲಿ ಇಲ್ಲ, ಕಳಂಕರಹಿತ ವ್ಯಕ್ತಿತ್ವ ಇದೆ. ರಾಜ್ಯದ ಜನ ಆಶೀರ್ವದಿಸಿದ್ರೆ, ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದ್ರೆ ನಾನು ಸಿಎಂ ಆಗುವ ಆಸೆ ಉಳ್ಳವನು. ಪಕ್ಷ ಮನಸ್ಸು ಮಾಡಿದ್ರೆ ರಾಜ್ಯದ ಸಿಎಂ ಆಗಬೇಕೆಂದು ಮನಸು ಮಾಡಿದ್ದೇನೆ. ಆದ್ರೆ, ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಹೀಗಾಗಿ, ಅದರ ಬಗ್ಗೆ ಚರ್ಚಿಸಲ್ಲ ಎಂದು ತಿಳಿಸಿದರು.

ನಳಿನ್‌ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ, ಅವರು ತಮ್ಮ ಅನಿಸಿಕೆ ಹೇಳಿರಬಹುದು. ನಾನು ನಳಿನ್‌ ಕುಮಾರ್ ಕಟೀಲ್ ಅನಿಸಿಕೆ ನೋಡಿಲ್ಲ. ನೋಡಿದ್ಮೇಲೆ ಪ್ರತಿಕ್ರಿಯಿಸುವೆ. ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಆದಾಗ ಆ ಬಗ್ಗೆ ವಿಚಾರ ಮಾಡ್ತೀನಿ. ಈಗ ಸಿಎಂ ಸ್ಥಾನ ಬದಲಾವಣೆಯಾದ್ರೆ ಉತ್ತರ ಕರ್ನಾಟಕಕ್ಕೆ ಕೊಡಬೇಕೆಂಬುದು ನಮ್ಮ ವಾದ. ಯಾರೇ ಸಿಎಂ ಆದರೂ ಅಖಂಡ ರಾಜ್ಯವನ್ನು ಆಳುವ ಸಿಎಂ ಇರಬೇಕು ಎಂದರು.

Last Updated : Jul 19, 2021, 10:57 PM IST

ABOUT THE AUTHOR

...view details