ಕರ್ನಾಟಕ

karnataka

ಬೆಳಗಾವಿ ಏರ್​ಪೋರ್ಟ್​ನಲ್ಲಿ ಕತ್ತಿ ಪಾರ್ಥಿವ ಶರೀರ... 10 ಮಠಾಧೀಶರಿಂದ ಮಂತ್ರ ಪಠಣ, ಬಿಕ್ಕಿಬಿಕ್ಕಿ ಕಣ್ಣೀರಿಟ್ಟ ಸಹೋದರ

By

Published : Sep 7, 2022, 2:33 PM IST

Updated : Sep 7, 2022, 3:46 PM IST

ಬೆಂಗಳೂರು ಹೆಚ್​ಎಎಲ್​ ಏರ್​ಪೋರ್ಟ್​ನಿಂದ ಬೆಳಗಾವಿಯ ಸಾಂಬ್ರಾ ಏರ್​ಪೋರ್ಟ್​ಗೆ ಉಮೇಶ್ ಕತ್ತಿ ಪಾರ್ಥಿವ ಶರೀರ ತರಲಾಯಿತು. ಬಳಿಕ ಇಲ್ಲಿಂದ ಕತ್ತಿ ಅವರ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾನಿಸಲಾಗಿತು.

ಬೆಳಗಾವಿ ಏರ್​ಪೋರ್ಟ್​ನಲ್ಲಿ ಕತ್ತಿ ಪಾರ್ಥಿವ ಶರೀರ
ಬೆಳಗಾವಿ ಏರ್​ಪೋರ್ಟ್​ನಲ್ಲಿ ಕತ್ತಿ ಪಾರ್ಥಿವ ಶರೀರ

ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್​ಪೋರ್ಟ್​ನಲ್ಲಿ ಸಚಿವರ, ಶಾಸಕರು ಹಾಗೂ ಸಂಸದರು ಸೇರಿದಂತೆ ಸಾವಿರಾರು ಬೆಂಬಲಿಗರು ಉಮೇಶ್​ ಕತ್ತಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಾಂಬ್ರಾ ಏರ್​ಪೋರ್ಟ್​ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ.

ಮಠಾಧೀಶರಿಂದ ಮಂತ್ರ ಪಠಣ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 10 ನಿಮಿಷಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಹತ್ತಕ್ಕೂ ಅಧಿಕ ಮಠಾಧೀಶರಿಂದ ಮಂತ್ರ ಪಠಣ ನೆರವೇರಿತು. ಉಮೇಶ್ ಕತ್ತಿ ಸಹೋದರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತಿಮ ದರ್ಶನದ ಬಳಿಕ ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯತ್ತ ಪಾರ್ಥಿವ ಶರೀರ ರವಾನಿಸಲಾಯಿತು. ರಸ್ತೆ ಉದ್ದಕ್ಕೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ ಕತ್ತಿ ಪಾರ್ಥಿವ ಶರೀರ

ಏರ್​ಪೋರ್ಟ್​ ಸುತ್ತ ಬಿಗಿ ಭದ್ರತೆ: ಪಾರ್ಥಿವ ಶರೀರ ತಂದಿರುವ ಹಿನ್ನೆಲೆ ವಿಮಾನ ನಿಲ್ದಾಣ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

ಸಚಿವ ಶಿವರಾಮ್ ಹೆಬ್ಬಾರ್, ಮಾಜಿ ಸಂಸದ ಪ್ರಭಾಕರ್ ಕೋರೆ, ಸಂಸದರಾದ ಈರಣ್ಣ ಕಡಾಡಿ, ಶಾಸಕರಾದ ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ, ಎಂಎಲ್ಸಿ ಪ್ರಕಾಶ ಹುಕ್ಕೇರಿ, ಬಸವರಾಜ ಹೊರಟ್ಟಿ, ಅನಿಲ್ ಬೆನಕೆ ಸೇರಿ ಹಲವರು ವಿಮಾನ ನಿಲ್ದಾಣದ ಆವರಣದಲ್ಲಿ ಅಂತಿಮ ನಮನ ಸಲ್ಲಿಸಿದರು.

Last Updated : Sep 7, 2022, 3:46 PM IST

For All Latest Updates

ABOUT THE AUTHOR

...view details