ಕರ್ನಾಟಕ

karnataka

ETV Bharat / state

ಲಕ್ಷ್ಮಿ ‌ಹೆಬ್ಬಾಳ್ಕರ್‌ ಕಾರು ಚಾಲಕನಾಗಿದ್ದ ವ್ಯಕ್ತಿಯ ಬರ್ಬರ ಕೊಲೆ..!

ಗ್ರಾಮ‌ ಪಂಚಾಯಿತಿ ಅಧ್ಯಕ್ಷನೊಬ್ಬ ಬರ್ಬರ ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

By

Published : Jan 3, 2020, 9:50 PM IST

Murder of a Grama panchayat president
ಲಕ್ಷ್ಮಿ ‌ಹೆಬ್ಬಾಳ್ಕರ್‌ ಕಾರು ಚಾಲಕನಾಗಿದ್ದ ವ್ಯಕ್ತಿಯ ಬರ್ಬರ ಕೊಲೆ..!

ಬೆಳಗಾವಿ:ಗ್ರಾಮ‌ ಪಂಚಾಯಿತಿ ಅಧ್ಯಕ್ಷನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಈತ ಈ ಹಿಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಲಕ್ಷ್ಮಿ ‌ಹೆಬ್ಬಾಳ್ಕರ್‌ ಕಾರು ಚಾಲಕನಾಗಿದ್ದ ವ್ಯಕ್ತಿಯ ಬರ್ಬರ ಕೊಲೆ..!

ತಿಗಡಿ ಗ್ರಾಪಂ ಅಧ್ಯಕ್ಷ ಮುನ್ನಾಸಾಬ್ ಬಹಾದ್ದೂರ ಶೇಖ್ (32) ಮೃತ. ನಾಲವಲಗಟ್ಟಿ- ತಿಗಡಿ ರಸ್ತೆ ಮಧ್ಯದಲ್ಲಿರುವ ಜಮೀನಿನಲ್ಲಿ ಈ ಘಟನೆ‌ ನಡೆದಿದೆ.

ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಸ್ತಿ ‌ವಿವಾದವೇ ಕೊಲೆಗೆ ಕಾರಣ‌ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಬೈಲಹೊಂಗಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details