ಕರ್ನಾಟಕ

karnataka

ETV Bharat / state

ಸದ್ಯಕ್ಕೆ ಬೆಳಗಾವಿಯಲ್ಲಿ ಆಕ್ಸಿಜನ್ ಕೊರತೆ ಇಲ್ಲ: ಡಿಸಿ ಡಾ.ಕೆ.ಹರೀಶ್ ಕುಮಾರ್​

ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಆಮ್ಲಜನಕ ಸಿಲಿಂಡರ್​ ಕೊರತೆ ಉಂಟಾಗಿಲ್ಲ, ಯಾವುದೇ ಕಾರಣಕ್ಕೂ ಮುಂದೆ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

By

Published : Apr 23, 2021, 10:38 PM IST

meeting
meeting

ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ತುರ್ತು ಪರಿಸ್ಥಿತಿ ನಿಭಾಯಿಸಲು ಅನುಕೂಲವಾಗುವಂತೆ ನಿರಂತರವಾಗಿ ಆಕ್ಸಿಜನ್ ಲಭ್ಯತೆ ಇರುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಸರಬರಾಜುದಾರರ ಬಳಿ ಇರುವ ಆಕ್ಸಿಜನ್ ಕಡ್ಡಾಯವಾಗಿ ಮೊದಲು ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಬೇಕು. ಅದೇ ರೀತಿ ಕೊಲ್ಲಾಪುರ ಮತ್ತು ಬಳ್ಳಾರಿಯಿಂದ ಇದುವರೆಗೆ ಪಡೆಯಲಾಗುತ್ತಿದ್ದ ಆಕ್ಸಿಜನ್ ಅನ್ನು ಕೂಡ ಯಥಾ ಪ್ರಕಾರ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.

ABOUT THE AUTHOR

...view details