ಕರ್ನಾಟಕ

karnataka

ETV Bharat / state

ಉತ್ತರ ಕರ್ನಾಟಕ ಪ್ರತ್ಯೇಕತೆ ಮಾತು: ಸಚಿವ ಕತ್ತಿ ಹೇಳಿಕೆಗೆ ಕಾರಜೋಳ ಹೀಗಂದ್ರು - North Karnataka will become a Separate state says umesh katti

ಕರ್ನಾಟಕ ಎರಡು ರಾಜ್ಯವಾಗಿ ಇಬ್ಭಾಗವಾಗಲಿದೆ ಎಂದು ಸಚಿವ ಉಮೇಶ ಕತ್ತಿ ‌ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

Karajola
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

By

Published : Jun 23, 2022, 7:47 PM IST

ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಎರಡು ರಾಜ್ಯವಾಗಿ ಇಬ್ಭಾಗವಾಗಲಿದೆ ಎಂದು ಸಚಿವ ಉಮೇಶ ಕತ್ತಿ ‌ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಇದು ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಸರ್ಕಾರವಾಗಲಿ, ಪಕ್ಷವಾಗಲಿ ಇಂಥ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ,

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ದೀನ ದಲಿತರ, ಅಲ್ಪಸಂಖ್ಯಾತರ ಹೆಸರಿನಲ್ಲಿ ರಾಜಕೀಯ ಮಾಡಿದೆ. ಬಿಜೆಪಿ ಸಾಮಾಜಿಕ ಭದ್ರತೆಯ ಮೇಲೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪತಿ‌ ಮುರ್ಮು ಅವರನ್ನು ಘೋಷಿಸಿದೆ. ಕಾಂಗ್ರೆಸ್ ದಲಿತರು, ಅಲ್ಪಸಂಖ್ಯಾತರಿಗೆ ದೊಡ್ಡ ಹುದ್ದೆ‌ ನೀಡಿರಲಿಲ್ಲ. ಆದ್ರೀಗ ದ್ರೌಪದಿ ಮುರ್ಮು ಉನ್ನತ ಹುದ್ದೆ ಅಲಂಕರಿಸಲಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಅಭಿನಂದಿಸುವೆ ಎಂದರು.

ಸಿದ್ದರಾಮಯ್ಯ ಅಹಿಂದ ಅಹಿಂದ ಎಂದು ಕಾಂಗ್ರೆಸ್ ಸೇರಿ ಓಡಾಡುತ್ತಿದ್ದಾರೆ. ಅದೇ ರೀತಿ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ 50 ವರ್ಷಗಳಿಂದ ರಾಜಕೀಯ ಮಾಡಿದರೂ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಕೊಡಲಿಲ್ಲ. ಸಿದ್ದರಾಮಯ್ಯರನ್ನೂ ರಾಷ್ಟ್ರೀಯ ನಾಯಕರನ್ನಾಗಿ ಮಾಡಲಿಲ್ಲ. ಇದು ಕೇವಲ ಕಾಂಗ್ರೆಸ್ ಬೂಟಾಟಿಕೆ ಎಂದು ಕಾರಜೋಳ ವಾಗ್ದಾಳಿ ನಡೆಸಿದರು. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸಿಗೆ ಆ ಸಮಾಜವನ್ನು ಉದ್ಧಾರ ಮಾಡಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ:2024ನೇ ಚುನಾವಣೆ ನಂತರ ದೇಶದಲ್ಲಿ 50 ರಾಜ್ಯಗಳ ಉದಯ: ಉಮೇಶ್‌ 'ಕತ್ತಿ' ವರಸೆ

For All Latest Updates

TAGGED:

ABOUT THE AUTHOR

...view details