ಕರ್ನಾಟಕ

karnataka

ETV Bharat / state

ಬೆಳಗಾವಿ ಕಲ್ಲು ತೂರಾಟ ಪ್ರಕರಣ: ಮತ್ತೋರ್ವ ಆರೋಪಿ ಆರೆಸ್ಟ್​

ಬೆಳಗಾವಿ ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

By

Published : Dec 26, 2019, 8:40 AM IST

Police Arrest
Police Arrest

ಬೆಳಗಾವಿ: ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೀರಭದ್ರ ನಗರದ ಅಭಿದ್​ಖಾನ್​ ಕಡೋಲಿ ಬಂಧಿತ ಆರೋಪಿ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆ ಮುಗಿಸಿ ಮರಳುವಾಗ ಕೆಲವರು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಡಿದ್ದರು.

ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗಾಗಲೇ ನಾಲ್ಕು ಜನ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.

ABOUT THE AUTHOR

...view details