ಬೆಳಗಾವಿ: ಲೋಕಸಭಾ ಉಪ ಚುನಾವಣಾ ಟಿಕೆಟ್ ಆಕಾಂಕ್ಷಿಗಳ ದಂಡು ಬೆಳಗಾವಿಗೆ ಜಿಲ್ಲೆಗೆ ದೌಡಾಯಿಸುತ್ತಿದೆ. ಈ ಮಧ್ಯೆ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಲು ಪ್ರಭಾಕರ್ ಕೋರೆ ಆಗಮಿಸಿದ್ದು, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಅಮಿತ್ ಶಾ ಆಗಮನ ಹಿನ್ನೆಲೆ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಶಾಸಕ ಅರವಿಂದ ಬೆಲ್ಲದ, ಪ್ರಭಾಕರ್ ಕೋರೆ, ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ, ಸಿಸಿ ಪಾಟೀಲ, ದುರ್ಯೋಧನ ಐಹೊಳೆ ಮುಂತಾದವರು ಭಾಗಿಯಾಗಿದ್ದಾರೆ.
ಏಪ್ರಿಲ್ ನಂತರ ಸಿಎಂ ಬದಲಾವಣೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರಭಾಕರ ಕೋರೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರದ್ದು ಯಾವುದೋ ಬೇರೆ ಆರ್ಎಸ್ಎಸ್ ಇರಬಹುದು ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಅಮಿತ್ ಶಾ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಆಗಿಲ್ಲ, ಪಕ್ಷ ಅವಕಾಶ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಇದೇ ವೇಳೆ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ತಿಳಿಸಿದ್ರು.