ಬೆಳಗಾವಿ:ಲೋಕಸಭೆ ಉಪಚುನಾವಣೆಗೆ ಈವರೆಗೂ ಯಾವುದೇ ಅಭ್ಯರ್ಥಿಗಳ ಹೆಸರನ್ನು ಶಿಪಾರಸು ಮಾಡಿಲ್ಲ. ಈಗಾಗಲೇ ಐದಾರು ಜನರ ಹೆಸರು ಚಾಲ್ತಿಯಲ್ಲಿವೆ. ಆದರೆ ಯಾವುದೂ ಅಂತಿಮವಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಿನ್ನೆ ನಡೆದ ಸಭೆಯಲ್ಲಿ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಈವರೆಗೂ ಯಾವುದೇ ಅಭ್ಯರ್ಥಿಗಳ ಹೆಸರನ್ನು ಶಿಪಾರಸು ಮಾಡಿಲ್ಲ. ಈಗಾಗಲೇ ಐದಾರು ಜನರ ಹೆಸರು ಕೇಳಿ ಬಂದಿದೆ. ಆದರೆ ಯಾವುದೂ ಅಂತಿಮವಲ್ಲ. ವೈಯಕ್ತಿಕವಾಗಿ ನನಗೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ಪಕ್ಷ ಏನೇ ನಿರ್ಧಾರ ಕೈಗೊಂಡರು ಪಕ್ಷದ ನಿರ್ಣಯಕ್ಕೆ ಬದ್ಧನಾಗಿದ್ದೇನೆ ಎಂದರು.