ಕರ್ನಾಟಕ

karnataka

By

Published : Nov 24, 2019, 10:33 AM IST

ETV Bharat / state

ಬಿಎಸ್​​ವೈ ಭೇಟಿಯಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ

ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ದಿಢೀರ್ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕುತೂಹಲ ಮೂಡಿಸಿದ ಇಬ್ಬರ ಸಂಗಮ

ಬೆಳಗಾವಿ:ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಮಾಡಿದರು.

ಬೆಳಗಾವಿಯ ಯುಕೆ 27 ಹೋಟೆಲ್​ಗೆ ಆಗಮಿಸಿದ ಪ್ರಕಾಶ ಹುಕ್ಕೇರಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಕೊನೆ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.

ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹುಕ್ಕೇರಿ, ಉಪಹಾರ ಸೇವಿಸಲು ಹೋಟೆಲ್​​​ಗೆ ಬಂದಿದ್ದೇನೆ. ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯವಾಗಿದೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿದರು.

For All Latest Updates

ABOUT THE AUTHOR

...view details