ಬೆಳಗಾವಿ: ಕೊರೊನಾ ವೈರಸ್ ತಡೆಗೆ ದೇಶದಾದ್ಯಂತ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ಡೌನ್ ಘೋಷಣೆ ಮಾಡಿದೆ. ಇದರಿಂದಾಗಿ ಎಣ್ಣೆ ಸಿಗದೆ ಪರದಾಡುತ್ತಿರೋ ಎಣ್ಣೆ ಪ್ರಿಯರು ಕಾತುರದಿಂದ ಕಾಯುತ್ತಿದ್ದು, ಈಗಾಗಲೇ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮಾಡಲು ಬಾರ್ ಅಂಗಡಿಗಳ ಮುಂದೆ ಬರದ ಸಿದ್ಧತೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ನಾಳೆಯಿಂದ ರಾಜ್ಯದಲ್ಲಿ ಮದ್ಯ ಮರಾಟ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಬಾರ್ ಮಾಲೀಕರು ಬೆಳಿಗ್ಗೆಯಿಂದಲೇ ಸಿದ್ಧತೆ ನಡೆಸಿದ್ದಾರೆ. ಇಂದು ಬಾರ್ ಮಾಲೀಕರ ಸಭೆ ನಡೆಸಿದ ಜಿಲ್ಲೆಯ ಅಬಕಾರಿ ಇಲಾಖೆ ಡಿಸಿ ಅನೀಲ್ಕುಮಾರ ನಾಯಕ್, ವಿವಿಧ ಬಾರ್ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.