ಕರ್ನಾಟಕ

karnataka

ETV Bharat / state

ಅಥಣಿಯಲ್ಲಿ ಅವ್ಯವ್ಯಸ್ಥೆಯ ಆಗರವಾದ ಶುದ್ಧ ಕುಡಿಯುವ ನೀರಿನ ಘಟಕ - ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪುನರ್ವಸತಿ ಝುಂಜರವಾಡ ಗ್ರಾಮ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪುನರ್ವಸತಿ ಝುಂಜರವಾಡ ಗ್ರಾಮದಲ್ಲಿ ಎರಡು ತಿಂಗಳಿಂದ ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿನ ಘಟಕ ಸಾರ್ವಜನಿಕರು ಪರದಾಡುವಂತಾಗಿದೆ.

csdfdf
ಅಥಣಿಯಲ್ಲಿ ಅವ್ಯವ್ಯಸ್ಥೆಯ ಆಗರವಾದ ಶುದ್ಧ ಕುಡಿಯುವ ನೀರಿನ ಘಟಕ

By

Published : Feb 15, 2020, 8:53 PM IST

ಅಥಣಿ:ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಇಲ್ಲದೆ ಸರಿಸುಮಾರು ಎರಡು ತಿಂಗಳಿಂದ ಸ್ಥಗಿತಗೊಂಡಿದೆ. ಪರಿಣಾಮ ಜನಸಾಮಾನ್ಯರು ನೀರಿಲ್ಲದೆ ಪರದಾಡುವಂತಾಗಿದೆ.

ಅಥಣಿಯಲ್ಲಿ ಅವ್ಯವ್ಯಸ್ಥೆಯ ಆಗರವಾದ ಶುದ್ಧ ಕುಡಿಯುವ ನೀರಿನ ಘಟಕ

ಈ ಕುಡಿಯುವ ನೀರಿನ ಘಟಕಕ್ಕೆ ವಿದ್ಯುತ್ ಸಂಪರ್ಕವಿದ್ದು, ಪಕ್ಕದಲ್ಲಿ ನೀರು ಸಹ ಇದೆ. ಆದರೂ ಸ್ಥಳೀಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಶುದ್ಧ ನೀರಿನಿಂದ ಜನ ವಂಚಿತವಾಗಿದ್ದಾರೆ. ನೀರಿನ ಘಟಕದಲ್ಲಿ ಕೆಲವು ಕಿಡಿಗೇಡಿಗಳು ಮಲ-ಮೂತ್ರ ವಿಸರ್ಜನೆ ಮಾಡಿ ವಿದ್ಯುತ್ ದೀಪಗಳನ್ನು ಕದಿಯುತ್ತಿದ್ದಾರೆ.

ಇನ್ನು ಬೇಸಿಗೆ ಸಮೀಪಿಸುತ್ತಿದ್ದು,ನೀರಿಗಾಗಿ ಹಾಹಾಕಾರ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಶುದ್ದ ಕುಡಿಯುವ ನೀರಿನ ಘಟಕಕ್ಕೆ ಕಾಯಕಲ್ಪ ಒದಗಿಸಬೇಕಿದೆ.

For All Latest Updates

TAGGED:

ABOUT THE AUTHOR

...view details