ಕರ್ನಾಟಕ

karnataka

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಆ.12ರಂದು ಪ್ರತಿಭಟನೆ: ಚನ್ನಪ್ಪ ಪೂಜಾರಿ

ರಾಜ್ಯ ಸರ್ಕಾರದ ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಆ.12 ರಂದು ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ಅವರ ಅಥಣಿ ನಿವಾಸ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತಸಂಘ ಸಂಚಾಲಕ ಚನ್ನಪ್ಪ ಪೂಜಾರಿ ತಿಳಿಸಿದರು.

By

Published : Aug 5, 2020, 9:46 AM IST

Published : Aug 5, 2020, 9:46 AM IST

Protest against land reform act
ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಆ.12ರಂದು ಪ್ರತಿಭಟನೆ: ಚನ್ನಪ್ಪ ಪೂಜಾರಿ

ಅಥಣಿ: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯ ಪ್ರತಿಭಟನೆ ಪೂರ್ವಭಾವಿ ಸಭೆಯನ್ನು ಅಥಣಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಭಾರತೀಯ ಕಿಸಾನ್ ಸಂಘದ ವತಿಯಿಂದ ರೂಪು ರೇಷೆಗಳ ಕುರಿತು ಚರ್ಚಿಸಲಾಯಿತು.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಆ.12ರಂದು ಪ್ರತಿಭಟನೆ: ಚನ್ನಪ್ಪ ಪೂಜಾರಿ

ಈ ವೇಳೆ ಮಾತನಾಡಿದ ರಾಜ್ಯ ರೈತಸಂಘ ಸಂಚಾಲಕ ಚನ್ನಪ್ಪ ಪೂಜಾರಿ, ಕೊರೊನಾ ಎಂದು ನಾವು ಮನೆಯಲ್ಲಿ ಕುಳಿತಿರುವ ಸಮಯ ನೋಡಿಕೊಂಡು ರಾಜ್ಯ ಸರ್ಕಾರ ಮಹತ್ವದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹೀಗೆ ಹಲವಾರು ಪ್ರಮುಖ ಕಾಯ್ದೆಗಳನ್ನು ತಿದ್ದುಪಡಿ ಮಾಡುತ್ತಿರುವುದು ಖಂಡನೀಯ. ಕಳೆದ ವರ್ಷ ಕೃಷ್ಣಾ ನದಿ ಪ್ರವಾಹದ ನೆರೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಕೊರೊನಾ ನೆಪ ಹೇಳಿ ಸರ್ಕಾರ ಮತ್ತು ಅಧಿಕಾರಿಗಳು ಜನರನ್ನು ಅರ್ಧ ಹಾದಿಯಲ್ಲಿ ಕೈಬಿಟ್ಟಿದ್ದಾರೆ. ವಿದ್ಯುತ್ ಖಾಸಗೀಕರಣ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ರೈತರಿಗೆ ಮರಣ ಶಾಸನ ಬರೆದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಮಾರಕವಾಗಿರುವ ಈ ಅಂಶಗಳಿಂದ ಯಾವುದೇ ಲಾಭ ಇಲ್ಲ. ಆದ್ದರಿಂದ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇದೇ ಆ. 12ರಂದು ಡಿಸಿಎಂ ಲಕ್ಷ್ಮಣ್​ ಸವದಿ ಅವರ ಮನೆಯ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. 13ರಂದು ಸಚಿವ ರಮೇಶ್​ ಜಾರಕಿಹೊಳಿ ಮನೆ ಎದುರು ಪ್ರತಿಭಟನೆ ನಡೆಸಿ ಮನವರಿಕೆ ಮಾಡಲು ಹೋರಾಟ ನಡೆಸಲಾಗುವುದು. 14ರಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಮನೆ ಎದುರು ಪ್ರತಿಭಟನೆ ನಡೆಸಲಿದ್ದು, ಆ. 15ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು.

ರೈತರ ಬೆಳೆಗಳಿಗೆ ಬೆಲೆ ನಿಗದಿ, ಬೆಂಬಲ ಬೆಲೆ, ಕಬ್ಬಿನ ಬಾಕಿ ಬಿಲ್ ಕೊಡುವುದನ್ನು ಬಿಟ್ಟು ರೈತರಿಗೆ ಅನಾನುಕೂಲ ಉಂಟು ಮಾಡಲಾಗುತ್ತಿದೆ. ರೈತರ ಈ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲ ಜನಪರ, ಕನ್ನಡಪರ ಸಂಘಟನೆಗಳು ಮುಂದೆ ಬರಬೇಕೆಂದು ಅವರು ಮನವಿ ಮಾಡಿದರು.

ABOUT THE AUTHOR

...view details