ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ: ನದಿಗಳ ಒಳಹರಿವಿನ ಪ್ರಮಾಣದಲ್ಲೂ ಇಳಿಮುಖ - ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳ ಹರಿವು

ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ತಗ್ಗಿದ್ದು, ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವಿನಲ್ಲೂ ಇಳಿಮುಖ ಕಂಡಿದೆ.

krishna
krishna

By

Published : Aug 24, 2020, 1:21 PM IST

Updated : Aug 24, 2020, 1:49 PM IST

ಚಿಕ್ಕೋಡಿ (ಬೆಳಗಾವಿ):ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಕಂಚ ತಗ್ಗಿದೆ. ಹೀಗಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವಿನಲ್ಲೂ ಇಳಿಮುಖ ಕಂಡಿದೆ.

ಕೃಷ್ಣಾ ನದಿಯಲ್ಲಿ 1,35,000ಕ್ಕೂ ಅಧಿಕ ಕ್ಯೂಸೆಕ್​ ಒಳಹರಿವು ಇದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಶ್​ ಸಂಪಗಾಂವಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1,13,500 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 22,000 ಕ್ಯೂಸೆಕ್ ನೀರು ಹೀಗೆ ಒಟ್ಟು 1,35,000 ಕ್ಯೂಸೆಕ್​ಗಿಂತಲೂ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ.

ನದಿಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಮುಖ

ಮಹಾರಾಷ್ಟ್ರದ ಕೊಯ್ನಾ - 49 ಮಿ.ಮೀ., ನವಜಾ - 55 ಮಿ.ಮೀ., ಮಹಾಬಲೇಶ್ವರ - 32 ಮಿ.ಮೀ., ವಾರಣಾ - 25 ಮಿ.ಮೀ., ಕಾಳಮ್ಮವಾಡಿ - 26 ಮಿ.ಮೀ., ರಾಧಾನಗರಿ - 44 ಮಿ.ಮೀ., ಪಾಟಗಾಂವ - 45 ಮಿ.ಮೀ. ಮಳೆ ವರದಿಯಾಗಿದೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಮತ್ತೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಸದ್ಯ ಕೊಯ್ನಾ ಜಲಾಶಯ 91%, ವಾರಣಾ ಜಲಾಶಯ 94%, ರಾಧಾನಗರಿ ಜಲಾಶಯ 100%, ಕಣೇರ ಜಲಾಶಯ 92%, ಧೂಮ ಜಲಾಶಯ 96%, ಪಾಟಗಾಂವ 100%, ಧೂದಗಂಗಾ 97% ತುಂಬಿದೆ. ಹಿಪ್ಪರಗಿ ಬ್ಯಾರೇಜ್‌ನಿಂದ 1,42,000 ಹಾಗೂ ಆಲಮಟ್ಟಿ ಜಲಾಶಯದಿಂದ 1,00,000 ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ.

Last Updated : Aug 24, 2020, 1:49 PM IST

ABOUT THE AUTHOR

...view details