ಚಿಕ್ಕೋಡಿ(ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ಕೃಷ್ಣಾ ನದಿ ಒಳ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ ಸೇತುವೆ ಜನ, ವಾಹನ ಸಂಚಾರಕ್ಕೆ ಮುಕ್ತವಾಗಿತ್ತು.
ಆದರೆ, ಕಳೆದ 10 ದಿನಗಳಲ್ಲಿ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದ ಪರಿಣಾಮ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ - ಕಲ್ಲೋಳ ಸೇತುವೆ ಕುಸಿಯುವ ಭೀತಿಯಲ್ಲಿದ್ದು ಪ್ರವಾಹದ ರಭಸಕ್ಕೆ ಬ್ಯಾರೇಜ್ನ ಒಂದು ಪಿಲ್ಲರ್ ಕೊಚ್ಚಿ ಹೋಗಿತ್ತು. ಇದರಿಂದ ಸ್ಥಳೀಯರು ಯಡೂರ - ಕಲ್ಲೋಳ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ.