ಬೆಳಗಾವಿ:ನಗರದ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮರುಸ್ಥಾಪನೆ ಮಾಡಿರುವುದು ವಿವಾದಕ್ಕೆ ತಿರುಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಸಂಧಾನ ಸಭೆ ನಡೆಸಿದೆ.
ಸಂಗೊಳ್ಳಿ ರಾಯಣ್ಣ ಮೂರ್ತಿ ಮರುಸ್ಥಾಪನೆ ವಿವಾದ: ಡಿಸಿ, ಎಡಿಜಿಪಿ ನೇತೃತ್ವದಲ್ಲಿ ಸಂಧಾನ ಸಭೆ - Sangolli Rayanna statue
ಸಂಗೊಳ್ಳಿ ರಾಯಣ್ಣ ಮೂರ್ತಿ ಮರುಸ್ಥಾಪನೆ ಮಾಡಿರುವುದು ವಿವಾದಕ್ಕೆ ತಿರುಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಸಂಧಾನ ಸಭೆ ನಡೆಸಿದೆ.

ಡಿಸಿ, ಎಡಿಜಿಪಿ ನೇತೃತ್ವದಲ್ಲಿ ಸಂಧಾನ ಸಭೆ
ಡಿಸಿ, ಎಡಿಜಿಪಿ ನೇತೃತ್ವದಲ್ಲಿ ಸಂಧಾನ ಸಭೆ
ಪೀರನವಾಡಿ ಬಳಿಯ ಲಕ್ಷ್ಮಿ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ. ಕನ್ನಡ ಸಂಘಟನೆಯ 25 ಜನ ಮುಖಂಡರು, ಎಂಇಎಸ್, ಶಿವಸೇನೆಯ 25 ಜನ ಹಾಗೂ ಸ್ಥಳೀಯರನ್ನು ಸಭೆಗೆ ಆಹ್ವಾನಿಸಲಾಗಿದೆ.
ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಕಮೀಷ್ನರ್ ಕೆ. ತ್ಯಾಗರಾಜನ್, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ್ ಸಭೆಯಲ್ಲಿ ಭಾಗಿಯಾಗಿದ್ದಾರೆ.
Last Updated : Aug 28, 2020, 7:49 PM IST