ಚಿಕ್ಕೋಡಿ (ಬೆಳಗಾವಿ):ಬ್ಯಾಂಕ್ನಿಂದ ಹಣ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯ ಕೈಲಿದ್ದ ಬ್ಯಾಗ್ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಹೋಗಿರುವ ಘಟನೆ ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿ ನಡೆದಿದೆ.
ವ್ಯಕ್ತಿಯ ಕೈಲಿದ್ದ ಹಣದ ಬ್ಯಾಗ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು! - ಬೆಳಗಾವಿ ಲೇಟೆಸ್ಟ್ ನ್ಯೂಸ್
ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ವ್ಯಕ್ತಿಯೊಬ್ಬರು ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು, ಕೈಲಿದ್ದ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ವ್ಯಕ್ತಿಯ ಕೈಲಿದ್ದ ಹಣದ ಬ್ಯಾಗ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು!
ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಸತ್ಯಪ್ಪ ದೇವಪ್ಪ ಖೋತ ಎಂಬುವವರು ಶುಕ್ರವಾರ ಮಧ್ಯಾಹ್ನ ಸೋಮವಾರ ಪೇಠದಲ್ಲಿರುವ ಸ್ಟೇಟ್ ಬ್ಯಾಂಕ್ನಿಂದ 5 ಲಕ್ಷ ರೂ. ಡ್ರಾ ಮಾಡಿಕೊಂಡು ಬಸವ ಸರ್ಕಲ್ ಬಳಿ ಹೋಗುತ್ತಿದ್ದರು. ಈ ವೇಳೆ, ಬೈಕ್ನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು, ಸತ್ಯಪ್ಪನ ಕೈಲಿದ್ದ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸತ್ಯಪ್ಪ ಕಬ್ಬೂರು ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಸಪಾಯಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತರಾಗಿದ್ದು, ನಿವೃತ್ತಿ ಹಣ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಈ ಕುರಿತು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.