ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರ ತಕ್ಷಣವೇ ರೈತ ವಿರೋಧಿ ನೀತಿ ಕೈ ಬಿಡಬೇಕು: ಸತೀಶ್ ಜಾರಕಿಹೊಳಿ - KPCC working manger Sathish jarkiholi

ರೈತರ ಜೊತೆ ಕಾಂಗ್ರೆಸ್ ಪಕ್ಷ ಇರುತ್ತದೆ. ಆದ್ರೆ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಸತೀಶ್​ ಜಾರಕಿಹೊಳಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

By

Published : Dec 1, 2020, 4:25 PM IST

ಬೆಳಗಾವಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ನಡೆಸುತ್ತಿರುವ ರೈತರ ಹೋರಾಟ ನಿಜವಾಗಲೂ ನ್ಯಾಯಸಮ್ಮತವಾಗಿದೆ. ರೈತರ ಜೊತೆ ನಮ್ಮ ಕಾಂಗ್ರೆಸ್ ಪಕ್ಷ ಇರುತ್ತದೆ. ಹೀಗಾಗಿ ತಕ್ಷಣವೇ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಈಗಾಗಲೇ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ರದ್ದುಪಡಿಸಬೇಕು. ಇದರ ಜೊತೆಗೆ ಶಾಂತಿಯುತವಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ತೊಂದರೆ ಕೊಡಬಾರದು ಎಂದಿದ್ದಾರೆ.

ABOUT THE AUTHOR

...view details