ಬೆಳಗಾವಿ:ಜಿಲ್ಲೆಯ ಗೋಕಾಕ್ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಾಯಕ್ ಗಲ್ಲಿಯಲ್ಲಿ ಬೆಳಿಗ್ಗೆ ಆರು ಜನರಿಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಳಿಸಿದೆ. ಗಾಯಾಳುಗಳು ಗೋಕಾಕ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ನಂತರ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸಲಹೆ ನೀಡಿದರು.
ಶ್ವಾನ ಕಡಿತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸತೀಶ್ ಜಾರಕಿಹೊಳಿ - ETV bharath karnataka
ಗೋಕಾಕ್ ನಗರದಲ್ಲಿ ಆರು ಜನರಿಗೆ ನಾಯಿ ಕಡಿದಿರುವ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
![ಶ್ವಾನ ಕಡಿತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸತೀಶ್ ಜಾರಕಿಹೊಳಿ satish jarakiholi inquires about the health of the injured](https://etvbharatimages.akamaized.net/etvbharat/prod-images/768-512-17053703-thumbnail-3x2-sa.jpg)
6 ಜನರಿಗೆ ನಾಯಿ ಕಡಿತ: ಗಾಯಾಳುಗಳು ಆರೋಗ್ಯ ವಿಚಾರಸಿದ ಸತೀಶ ಜಾರಕಿಹೊಳಿ.