ಕರ್ನಾಟಕ

karnataka

ಬೆಳೆಯುತ್ತಿರುವ ಬೆಳಗಾವಿಗೆ ಭಂಗ ತರದಿರಿ: ಸತೀಶ ಜಾರಕಿಹೊಳಿ ಮನವಿ

By

Published : Dec 5, 2022, 7:11 AM IST

ಬೆಳಗಾವಿ ಬೆಳೆಯುತ್ತಿರುವ ನಗರ. ಇದಕ್ಕೆ ಭಂಗ ತರುವ ಕೆಲಸ‌ ಮಾಡಬಾರದು-ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

KPCC Working President Satish Jarkiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ:ನಗರದ ಗೋಗಟೆ ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದ ಯುವಕನ ಮೇಲೆ ಬೆಳಗಾವಿ ನಗರ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಿರುವ ಆರೋಪ ಪ್ರಕರಣವನ್ನು ಅಲ್ಲಿಗೆ ಬಿಟ್ಟು ಬಿಡುವುದು ಒಳ್ಳೆಯದು. ಪದೇ ಪದೆ ಕನ್ನಡ, ಮರಾಠಿ ಆಗಬಾರದು. ಬೆಳಗಾವಿ ಬೆಳೆಯುತ್ತಿರುವ ನಗರ. ಇದಕ್ಕೆ ಭಂಗ ತರುವ ಕೆಲಸ‌ ಮಾಡಬಾರದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಮಾತನಾಡಿದ ಮಾತನಾಡಿದ ಅವರು, ಬೆಳಗಾವಿ ಬೆಳೆಯಲು ಅವಕಾಶ ಕೊಡಬೇಕು. 20 ವರ್ಷದ ಹಿಂದೆ ಬೆಳಗಾವಿಯಲ್ಲಿ ಹಿಂದೂ,‌ ಮುಸ್ಲಿಂ ಗಲಾಟೆಯಾಗಿ ಅಭಿವೃದ್ಧಿ ಕುಂಠಿತವಾಗಿತ್ತು. ಸದ್ಯ ಈಗ ಇಂತಹ ಗಲಾಟೆಗಳು ತಣ್ಣಗಾಗಿದ್ದು, ಈಗ ಬೆಳಗಾವಿ ಬೆಳೆಯುತ್ತಿದೆ. ನಗರದಲ್ಲಿ ಯಾವುದೊಂದು ವಿಷಯವನ್ನು ದೊಡ್ಡದಾಗಿ ಮಾಡುವುದು ಸರಿಯಲ್ಲ. ಠಾಣೆಗೆ ದೂರು ನೀಡಲು ಜನರು ಬಂದರೊಂದಿಗೆ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು. ಹೋರಾಟಗಾರರ ಮನೆಗೆ ಬೆಂಕಿ ಹಚ್ಚುವುದಾಗಿ ಹೇಳುವ ಪೊಲೀಸರ ನಡೆ ಸರಿಯಿಲ್ಲ ಎಂದರು.

ಬಿಜೆಪಿ ಸರ್ಕಾರಕ್ಕೆ ಧಮ್‌ ಇಲ್ಲ: ಇಂಥ ಪ್ರಕರಣದಲ್ಲಿ ಗಟ್ಟಿ ಕ್ರಮ ತೆಗೆದುಕೊಳ್ಳುವ ಅಥವಾ ಯಾವುದೇ ಪ್ರಕರಣದಲ್ಲಿ ಕ್ರಮ ಜರುಗಿಸುವ ಧಮ್ ಬಿಜೆಪಿ ಸರ್ಕಾರಕ್ಕಿಲ್ಲ. ಬಿಜೆಪಿ ಅವರು ಧಮ್ ಬಗ್ಗೆ ಮಾತನಾಡುತ್ತಾರೆ. ಇಲ್ಲಿ ಉಸ್ತುವಾರಿ ಸಚಿವರು, ಶಾಸಕರಿಗೆ ಇರುವ ಶಕ್ತಿ ಸರ್ಕಾರಕ್ಕೆ ಇಲ್ಲ. ಇದು ಬೇರೆ ಬೇರೆ ವಿಷಯದಲ್ಲಿಯೂ ಸಾಬೀತಾಗಿದೆ. ಇದನ್ನು ಹೆಚ್ಚು ಮುಂದುವರೆಸವುದು ಸರಿಯಲ್ಲ. ಅಲ್ಲದೇ, ಪೊಲೀಸರು ಕನ್ನಡ ಧ್ವಜದ ಬಗ್ಗೆ ಬಳಕೆ ಮಾಡಿರುವ ಪದ‌ ಸರಿಯಲ್ಲ ಎಂದು ಹೇಳಿದರು.

ಸರ್ವೇಯಲ್ಲಿ ಹೆಸರು ಬಂದವರಿಗೆ ಟಿಕೆಟ್: ಈಗಾಗಲೇ ಬೆಳಗಾವಿಯ ಎಲ್ಲ ಕ್ಷೇತ್ರದಲ್ಲಿ ಸರ್ವೇ ನಡೆಸಲಾಗುತ್ತಿದೆ. 2ನೇ ಬಾರಿಯೂ ಸರ್ವೇ ಕೆಲಸ ನಡೆಯುತ್ತಿದೆ. ಎಐಸಿಸಿಯಿಂದ, ಕೆಪಿಸಿಸಿ, ಸಿಎಲ್​​ಪಿ ಕಡೆಯಿಂದ ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಜನ ಆಕಾಂಕ್ಷಿಗಳಿದ್ದಾರೆ. ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಸರ್ವೇಯಲ್ಲಿ ಯಾರ ಹೆಸರು ಬರುತ್ತದೆಯೋ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತೇವೆ. ಸವದತ್ತಿ ಕ್ಷೇತ್ರದಲ್ಲಿ ನಮ್ಮ ಪಕ್ಷ ಗೆಲ್ಲಬೇಕೆಂಬ ಆಸೆ ನಮಗೂ ಇದೆ. ಆದ್ದರಿಂದ ಅಲ್ಲಿಯೂ ಕೂಡಾ ಚುನಾವಣೆ ವೇಳೆ ಹೆಚ್ಚು ಮುತುವರ್ಜಿ ವಹಿಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಡಿ.ಬಿ ಇನಾಮದಾರ ಅವರ ಭೇಟಿಯ ವಿಚಾರ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಬಿ.ಇನಾಮದಾರ ನಮ್ಮ ಪಕ್ಷದ ನಾಯಕರು. ಮಾಜಿ ಶಾಸಕರು ಪಕ್ಷ ಸಂಘಟನೆ ಸೇರಿದಂತೆ ಸಾಕಷ್ಟು ವಿಷಯದ ಬಗ್ಗೆ ಚರ್ಚೆ ಮಾಡಿದ್ದೆವು ಎಂದು ಸತೀಶ್​ ಜಾರಕಿಹೊಳಿ ಮಾಹಿತಿ ನೀಡಿದರು.

ಸವದತ್ತಿ ಮತಕ್ಷೇತ್ರದಲ್ಲಿ ಹೆಚ್​.ಎಂ ರೇವಣ್ಣ ಟಿಕೆಟ್​​ಗಾಗಿ ಅರ್ಜಿ ಹಾಕಿದ್ದು, ಅವರಿಗಾಗಿಯೋ ಅಥವಾ ಸಿದ್ದರಾಮಯ್ಯನವರ ಸಲುವಾಗಿಯೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅರ್ಜಿ ಹಾಕಲು ಎಲ್ಲರಿಗೂ ಅವಕಾಶ ಇದೆ. ಸವದತ್ತಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕೆಂಬ ಉದ್ದೇಶ ಇದೆ‌ ಅಷ್ಟೇ ಎಂದರು.

ಬೆಳಗಾವಿ ಗಡಿ ವಿವಾದ: ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಗಡಿ ಭಾಗದಲ್ಲಿ ಚುನಾವಣೆ ಗಿಮಿಕ್:ಮಹಾರಾಷ್ಟ್ರದಲ್ಲಿರುವ ಜತ್, ಅಕ್ಕಲಕೋಟೆಯ ಜನ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ. ಅವರು ಇಲ್ಲಿ ಬರೋಕೆ ಆಗಲ್ಲ. ನಾವು ಅಲ್ಲಿ ಹೋಗೋಕ್ಕೆ ಆಗಲ್ಲ. ಅದು ಕೇವಲ ಚರ್ಚೆಗೆ ಸೀಮಿತವಾಗುತ್ತದೆ. ಒಂದು ಬಾರಿ ವಿಭಜನೆಯಾದರೆ ಅಂತಿಮ‌ ಚರ್ಚೆ. ಈ ಭಾಗದ ಜನರಿಗೆ ಕುಡಿಯುವ ನೀರು ಕೊಡದೆ ಇರುವುದು ಮಹಾರಾಷ್ಟ್ರದ ರಾಜಕೀಯ ಗಿಮಿಕ್. ಸಚಿವರು ಬೆಳಗಾವಿ ಒಳಗೆ ಬರಲು ಪೊಲೀಸರು ಬಿಡುವುದಿಲ್ಲ. ಅವರನ್ನು ನಿಪ್ಪಾಣಿಯಲ್ಲಿಯೇ ತಡೆ ಹಿಡಿಯುತ್ತಾರೆ ಎಂದು ತಿಳಿಸಿದರು.

ಯಮಕನಮರಡಿ‌ ಕ್ಷೇತ್ರದಿಂದ ಸ್ಪರ್ಧೆ ಖಚಿತ:ಈ ಬಾರಿಯೂ ನಾನು ಯಮಕನಮರಡಿ‌ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧನಾಗಿದ್ದು, ನನ್ನ ಸೋಲಿಸಲು ಕಳೆದ ಮೂರು ವರ್ಷದಿಂದ ಬಿಜೆಪಿಯವರು ಐದಾರು ಜನರನ್ನು ಗುರಿ ಮಾಡಿದ್ದಾರೆ. ನಮಗೆ ಬಿಜೆಪಿಯಿಂದ ತೊಂದರೆ ಇಲ್ಲ. ನಮ್ಮ ಕಾರ್ಯಕರ್ತರು ಸಾಕಷ್ಟು ತಯಾರಿಯಲ್ಲಿದ್ದು, ಚುನಾವಣೆ ಎದುರಿಸಲು ನಾವು ಕೂಡಾ ಸಜ್ಜಾಗಿದ್ದೇವೆ ಎಂದರು.

ಇದನ್ನೂ ಓದಿ:ಸತೀಶ್ ಬೆಂಬಲಿಗರಿಂದ ಘೇರಾವ್​​: ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ಬಣದಿಂದ ಗೌಪ್ಯ ಸಭೆ..!

ABOUT THE AUTHOR

...view details