ಕರ್ನಾಟಕ

karnataka

ETV Bharat / state

ಗೋಕಾಕ್‌ನಲ್ಲಿ ಸತೀಶ್ ಜಾರಕಿಹೊಳಿ ಸಂಚಾರ; ರಸ್ತೆ ದುರವಸ್ಥೆ ಕಂಡು ಅಧಿಕಾರಿಗಳ ಮೇಲೆ ಆಕ್ರೋಶ - ಸತೀಶ್ ಜಾರಕಿಹೊಳಿ ಸಂಚಾರ

ಗೋಕಾಕ್ ನಗರದಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಸತೀಶ ಜಾರಕಿಹೊಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೋಕಾಕ್ ನಗರದ ಬೀದಿಯಲ್ಲಿ ಸತೀಶ್ ಜಾರಕಿಹೊಳಿ ಸಂಚಾರ

By

Published : Oct 8, 2019, 11:14 PM IST

ಗೋಕಾಕ್:ನಗರದಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ನಗರದ ವಿವಿಧ ರಸ್ತೆಗಳಲ್ಲಿ ಕಾಲ್ನಡಿಗೆಯಲ್ಲೇ ತಿರುಗಾಡಿದ ಅವರು, ಜನರು ಸಂಚರಿಸಲು ಯೋಗ್ಯವಲ್ಲದ ರಸ್ತೆಗಳ ದುಃಸ್ಥಿತಿ ಕಂಡು ನಗರಸಭೆಯ ಆಡಳಿತದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು.ನಗರಸಭೆ ಅಧಿಕಾರಿಗಳು ಈ ರಸ್ತೆಗಳಲ್ಲಿ ಅಡ್ಡಾಡಿರುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಅವರು ಕಿಡಿ ಕಾರಿದ್ರು.

ಗೋಕಾಕ್ ನಗರದ ಬೀದಿಯಲ್ಲಿ ಸತೀಶ್ ಜಾರಕಿಹೊಳಿ ಸಂಚಾರ
ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯೇ ಈ ಪರಿಸ್ಥಿತಿಗೆ ಕಾರಣವಾಗಿದ್ದು ಇಂತಹ ಅಧಿಕಾರಿಗಳ ಮಾನಸಿಕ ಸ್ಥಿತಿ ಸರಿ ಮಾಡುವ ಅವಶ್ಯಕತೆಯಿದೆ ಎಂದು ಇದೇ ವೇಳೆ ಎಚ್ಚರಿಕೆ ಕೊಟ್ಟರು.
ಶಾಸಕರು ಕಾಲ್ನಡಿಗೆಯಲ್ಲಿ ಸಂಚರಿಸುವಾಗ ಅಲ್ಲಲ್ಲಿ ನಿಂತು ಜನತೆಯ ಅಹವಾಲು ಸ್ವೀಕರಿಸಿದ್ರು.

ABOUT THE AUTHOR

...view details