ಕರ್ನಾಟಕ

karnataka

By

Published : Jul 31, 2019, 9:20 AM IST

ETV Bharat / state

ಉದ್ಯಮಿ ಸಿದ್ದಾರ್ಥ್​​​ ಸಾವು ತೀವ್ರ ಆಘಾತ ತಂದಿದೆ: ಯಡಿಯೂರಪ್ಪ

ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ ಎಂದು ಸಿಎಂ ಯಡಿಯೂರಪ್ಪ ತಪ್ಪ ಟ್ವಿಟ್ಟರ್​ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಉದ್ಯಮಿ ಸಿದ್ದಾರ್ಥ್​​​ ಸಾವು ತೀವ್ರ ಆಘಾತ ತಂದಿದೆ : ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.

ಸಿದ್ಧಾರ್ಥ್​ ಸಾವು ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಿಎಸ್​ವೈ ಟ್ವೀಟ್​ ಮಾಡಿದ್ದಾರೆ.

ಸಿದ್ದಾರ್ಥ್​​ ಕಳೆದೆ 29ರ ಸಂಜೆಯಿಂದ ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ABOUT THE AUTHOR

...view details