ಕರ್ನಾಟಕ

karnataka

ETV Bharat / state

ದೇವೇಗೌಡ್ರು ರಾಜ್ಯದ ಜನರನ್ನು ಹುಚ್ಚರನ್ನಾಗಿ ಮಾಡಲು ಹೊರಟಿದ್ದಾರೆ: ನಡಹಳ್ಳಿ - SP Patil Latest News

ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವ ಇಂಗಿತ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಟಾಂಗ್​ ಕೊಟ್ಟ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ.

ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ವ್ಯಂಗ್ಯ
ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ವ್ಯಂಗ್ಯ

By

Published : Dec 3, 2019, 4:07 PM IST

ಬೆಳಗಾವಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವ ಇಂಗಿತ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯದ ಜನರನ್ನು ಹುಚ್ಚರನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವ್ಯಂಗ್ಯವಾಡಿದರು.

ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ಗೋಕಾಕ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಈಗ ಖರ್ಗೆ ಅವರ ನೆನಪಾಗುತ್ತಿದೆ. ಮೈತ್ರಿ ಸರ್ಕಾರದ ಸಂದರ್ಭದಲ್ಲೇ ಖರ್ಗೆ ಅವರನ್ನು ಸಿಎಂ ಮಾಡಬಹುದಿತ್ತಲ್ವಾ? ರಾಜ್ಯದ ಜನರು ಪ್ರಜ್ಞಾವಂತರಿದ್ದು, ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗಾಗಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೋಕಾಕ್​ ಕ್ಷೇತ್ರದ ಉಪ ಚುನಾವಣಾ ಬಹಿರಂಗ ಪ್ರಚಾರಕ್ಕಿಂದು ಕೊನೆಯ ದಿನ. ಹೀಗಾಗಿ ನಾನು, ಬಾಲಚಂದ್ರ ಜಾರಕಿಹೊಳಿ‌ ಮತ್ತು ರಮೇಶ್ ​ನೇತೃತ್ವದಲ್ಲಿ ಮೂರು ತಂಡ ಮಾಡಿದ್ದೇವೆ. ಇಂದು‌ ಕ್ಷೇತ್ರದ 95 ಗ್ರಾಮಗಳಿಗೆ ಭೇಟಿ ನೀಡಿ, ಬೂತ್ ಮಟ್ಟದ ಕಾರ್ಯಕರ್ತರನ್ನು ಭೇಟಿ ಮಾಡಿ ಬಿಜೆಪಿಗೆ ಹೆಚ್ಚಿನ ಮತ ಬರುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ABOUT THE AUTHOR

...view details