ಬೆಳಗಾವಿ: ಓದುವಂತೆ ಪೋಷಕರು ಬುದ್ಧಿ ಹೇಳಿದಕ್ಕೆ ಬಾಲಕ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಸದಾಶಿವ ನಗರದಲ್ಲಿ ನಡೆದಿದೆ.
ಓದಲು ಹೇಳಿದ್ದಕ್ಕೆ ನೇಣಿಗೆ ಶರಣಾದ ಬಾಲಕ
ಮನೆಯಲ್ಲಿ ಪೋಷಕರು ಓದು ಎಂದು ಹೇಳಿದ್ದಕ್ಕಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕ
ತಮ್ಮ ಮನೆಯಲ್ಲೇ ಸುಜಲ್ ಕಳ್ಳಿಗುದ್ದಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ಎಸ್ಎಲ್ಸಿ ಓದುತ್ತಿದ್ದ ಸುಜಲ್ಗೆ ಪೋಷಕರು ಓದುವಂತೆ ಹೇಳಿದ್ದಾರೆ. ಇದರಿಂದ ಮನನೊಂದು ಆತ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.