ಕರ್ನಾಟಕ

karnataka

ETV Bharat / state

ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಕೈಬಿಡಿ: ಶಾಸಕ ಉಮೇಶ ಕತ್ತಿ

ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡುತ್ತಿರುವುದನ್ನು ಸರ್ಕಾರ ನಿಲ್ಲಿಸಬೇಕು. ಇದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಮನವಿ ಮಾಡಿದರು.

By

Published : Aug 21, 2020, 7:18 PM IST

MLA umesh katti
ಶಾಸಕ ಉಮೇಶ ಕತ್ತಿ

ಚಿಕ್ಕೋಡಿ‌:ಸರ್ಕಾರ ಸ್ವಾಬ್ ಟೆಸ್ಟಿಂಗ್ ಟಾರ್ಗೆಟ್ ನೀಡಿರುವುದು ಹಾಗೂ ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡುತ್ತಿರುವುದನ್ನು ಕೈ ಬಿಡಬೇಕು. ಸ್ವ ಇಚ್ಛೆಯಿಂದ ಬಂದವರಿಗೆ ಮಾತ್ರ ಪರೀಕ್ಷೆಗೆ ಒಳಪಡಿಸಬೇಕು ಎಂದು ಹುಕ್ಕೇರಿ ಶಾಸಕ‌ ಉಮೇಶ ಕತ್ತಿ ಸರ್ಕಾರಕ್ಕೆ ಒತ್ತಾಯಿಸಿದರು.

ಶಾಸಕ ಉಮೇಶ ಕತ್ತಿ

ಈ ಕೊರೊನಾ ಪರೀಕ್ಷೆಗಳಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಕೆಲವರು ಮನೆಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಸರ್ಕಾರದ ಆದೇಶದಿಂದ ಹಿರಿಯ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರ ತಕ್ಷಣ ಈ ಆದೇಶವನ್ನು ಕೈ ಬಿಡಬೇಕು ಎಂದು ಹೇಳಿದರು.

ABOUT THE AUTHOR

...view details