ಕರ್ನಾಟಕ

karnataka

ETV Bharat / state

ಅನಗತ್ಯವಾಗಿ ರೋಡಿಗಿಳಿದರೆ ಬೆಲೆ ತೆರಬೇಕಾಗುತ್ತೆ: ಬೆಳಗಾವಿ ಎಸ್ಪಿ ಎಚ್ಚರಿಕೆ - ಸಾರ್ವಜನಿಕರಿಗೆ ಬೆಳಗಾವಿ ಎಸ್ಪಿ ಎಚ್ಚರಿಕೆ

ಲಾಕ್​​ಡೌನ್ ನಿಯಮ ಉಲ್ಲಂಘಿಸಿ ರೋಡಿಗಿಳಿಯುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಲಿದೆ. ಸದ್ಯ ಕೋರ್ಟ್​ಗಳು ಬಂದ್ ಇರುವ ಕಾರಣ ನಿಯಮ ಉಲ್ಲಂಘಿಸುವವರು ಬೆಲೆ ತೆರಬೇಕಾಗುತ್ತದೆ ಎಂದು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Strict action if violated the rule: Belgaum Sp
ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ

By

Published : Mar 25, 2020, 11:41 PM IST

ಬೆಳಗಾವಿ:ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್​​ಡೌನ್ ಆಗಿದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲಿರುವುದು ಬಿಟ್ಟು ಅನಗತ್ಯವಾಗಿ ರಸ್ತೆಗಿಳಿದರೆ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಖಡಕ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಾತನಾಡಿದ ಅವರು, ಲಾಕ್​​ಡೌನ್ ನಿಯಮ ಉಲ್ಲಂಘಿಸಿ ರೋಡಿಗಿಳಿಯುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಲಿದೆ. ಸದ್ಯ ಕೋರ್ಟ್​ಗಳು ಬಂದ್ ಇರುವ ಕಾರಣ ನಿಯಮ ಉಲ್ಲಂಘಿಸುವವರು ಬೆಲೆ ತೆರಬೇಕಾಗುತ್ತದೆ ಎಂದರು.

ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ

ಹಲವೆಡೆ ವೈದ್ಯಕೀಯ ಸಂಶೋಧನೆ ನಡೆಯುತ್ತಿದ್ದರೂ ಕೊರೊನಾ ತಡೆಯಲು ಔಷಧ ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊರೊನಾ ನಿಯಂತ್ರಿಸಲು ಸಾಮಾಜಿಕ ಅಂತರ ಅತ್ಯವಶ್ಯಕ. ಈ ಕಾರಣಕ್ಕೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜಾತ್ರೆ, ಹಬ್ಬ, ಸಂಚಾರ ಮಾಡದೇ ಇದ್ದಾಗ ಕೊರೊನಾ ನಿಯಂತ್ರಿಸಬಹುದು. ಈ ಕಾರಣಕ್ಕಾಗಿ ಬಸ್, ರೈಲು, ಆಟೋ, ವಿಮಾನ ಸೇವೆ ರದ್ದುಗೊಳಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಗತ್ಯ ವಸ್ತುಗಳ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ. ಹಾಲು, ತರಕಾರಿ, ದಿನಸಿ ಲಭ್ಯತೆ ಇದೆ. ಹೀಗಾಗಿ ಅಗತ್ಯಕ್ಕಿಂತ ಹೆಚ್ಚು ವಸ್ತುಗಳನ್ನು ಯಾರೂ ಖರೀದಿಸಬಾರದು. ಖರೀದಿ ವೇಳೆ ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

For All Latest Updates

ABOUT THE AUTHOR

...view details