ಕರ್ನಾಟಕ

karnataka

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭಯ: ಬೆಳಗಾವಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

10ನೇ ತರಗತಿ ಪರೀಕ್ಷೆಗೆ ಹೆದರಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

By

Published : Jun 19, 2020, 11:39 AM IST

Published : Jun 19, 2020, 11:39 AM IST

Student died
Student died

ಬೆಳಗಾವಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಭಯದಿಂದ ಜಿಲ್ಲೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.

ಬೆಳಗಾವಿ ತಾಲೂಕಿನ ಪಂಥ ಬಾಳೇಂಕುಂದ್ರಿ ಗ್ರಾಮದ ಮೌನೇಶ ಸುತಾರ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಜೂನ್ 25 ರಿಂದ ಪರೀಕ್ಷೆ ಆರಂಭವಾಗುತ್ತೆ. ಹೀಗಾಗಿ ಸರಿಯಾಗಿ ಓದುವಂತೆ ಪೋಷಕರು ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ಬೇಜಾರಾದ ಬಾಲಕ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾನೆ.

ಪೋಷಕರು‌ ಆತನನ್ನು ಚಿಕಿತ್ಸೆಗೆಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿಮಧ್ಯೆ ಪುತ್ರ ಮೃತಪಟ್ಟಿದ್ದಾನೆ.

ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details