ಕರ್ನಾಟಕ

karnataka

ETV Bharat / state

ಕೃಷ್ಣಾ ನದಿ ನೀರಿನ ಹೋರಾಟಕ್ಕೆ ಸಾಥ್​ ನೀಡಿದ ಪ್ರಭು ಚನ್ನಬಸವ ಸ್ವಾಮೀಜಿ

ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅಥಣಿ ಕಾಗವಾಡ ಶಾಸಕರು ಮತ್ತು ಮಾಜಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

By

Published : May 24, 2019, 6:39 PM IST

ಪ್ರಭು ಚನ್ನಬಸವ ಸ್ವಾಮೀಜಿ

ಚಿಕ್ಕೋಡಿ:ಕಳೆದ ಎರಡು ತಿಂಗಳಿಂದ ಬತ್ತಿ ಹೋಗಿರುವ ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಐದು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಹೋರಾಟಕ್ಕೆ ಪ್ರಭು ಚನ್ನಬಸವ ಸ್ವಾಮೀಜಿ ಸಾಥ್ ನೀಡಿದ್ದಾರೆ.

ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಥಣಿ ಪತ್ರಕರ್ತರ ಸಂಘ, ನ್ಯಾಯವಾದಿಗಳ ಸಂಘದ ಜೊತೆಗೆ ಸುಮಾರು ಮೂವತ್ತಕ್ಕೂ ಹೆಚ್ಚು ಸಂಘಟನೆಗಳ ಸಹಭಾಗಿತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅಥಣಿ ಕಾಗವಾಡ ಶಾಸಕರು ಮತ್ತು ಮಾಜಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಪ್ರಭು ಚನ್ನಬಸವ ಸ್ವಾಮೀಜಿ

ಸದ್ಯ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯ ಇದ್ದು, ಮಳೆಯಾಗದೆ ಕೃಷ್ಣಾ ನದಿ ಬತ್ತಿ ಹೋದ ಪರಿಣಾಮ ಜನರು ಪರಿತಪಿಸುವಂತಾಗಿದೆ. ಆದಷ್ಟು ಬೇಗ ಈ ಭಾಗದ ಜನಪ್ರತಿನಿಧಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಅವಶ್ಯಕತೆ ಇದೆ ಎಂದರು.

ABOUT THE AUTHOR

...view details