ಬೆಳಗಾವಿ: ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗರಂ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತೆರಳಿದ್ದಾರೆ.
ನಗರದ ಎಸ್ಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊರಗೆ ಬರುತ್ತಿದ್ದಂತೆ ಮಾಧ್ಯಮದವರು ಹೆಚ್.ವಿಶ್ವನಾಥ್ ಹೇಳಿಕೆ ಕುರಿತಾಗಿ ಕೇಳಿದ ಪ್ರಶ್ನೆಗೆ ಗೃಹ ಸಚಿವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕಳೆದ ಐದು ದಿನಗಳಿಂದ ಪ್ರವಾಸದಲ್ಲಿದ್ದೇನೆ ಎಂದು ಹೇಳಿದ್ದಾರೆ.