ಕರ್ನಾಟಕ

karnataka

ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರ ಬಂಧನ

ವಾಹನಗಳನ್ನು ಕಳ್ಳತನ ಮಾಡಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಥಣಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 21 ಬೈಕ್​​, 1 ಟ್ರ್ಯಾಕ್ಟರ್​ ಹಾಗೂ 8 ಲಕ್ಷ 50 ಸಾವಿರ ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

By

Published : Apr 1, 2019, 4:11 PM IST

Published : Apr 1, 2019, 4:11 PM IST

ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಚಿಕ್ಕೋಡಿ : ಕಳ್ಳತನ ಮಾಡಿ ಮಾರಾಟ ಮಾಡಿದ್ದ 21 ಬೈಕ್​​, 1 ಟ್ರ್ಯಾಕ್ಟರ್​ ಸೇರಿದಂತೆ ಒಟ್ಟು 8 ಲಕ್ಷ 50 ಸಾವಿರ ರೂ. ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆದ ಅಥಣಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಸಪ್ತಸಾಗರ ಗ್ರಾಮದ ರಾಜಕುಮಾರ ಚುನಾರ​ (28), ರವಿಚಂದ್ರ ಚುನಾರ​ (27) ಮತ್ತು ನದಿ ಇಂಗಳಗಾಂವ ಗ್ರಾಮದ ರಾಜು ಮುದಿಗೌಡರ್ (38) ಬಂಧಿತ ಆರೋಪಿಗಳು.

ಬಂಧಿತರು ಕಳ್ಳತನವನ್ನೇ ದಂಧೆಯನ್ನಾಗಿಸಿಕೊಂಡಿದ್ದರು. ಕಳೆದ ಎರಡು ವರ್ಷದಿಂದ ಕಳ್ಳತನ ಮಾಡಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್​ಗಳನ್ನು ಮಾರಾಟ ಮಾಡಿಕೊಂಡು ಬಂದಿದ್ದರು. ಪ್ರಕರಣವನ್ನು ಬೆನ್ನತ್ತಿದ ಅಥಣಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಅವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details