ಬೆಳಗಾವಿ: ಕೋವಿಡ್ ಅವ್ಯವಹಾರ ಮಾಡುವುದು ದೇವರಿಗೆ ಮೋಸ ಮಾಡಿದ ಹಾಗೆ. ಹೀಗಾಗಿ ರಾಜ್ಯದಲ್ಲಿ ಅಕ್ರಮ ಎಸಗುವ ಅಧಿಕಾರಿಗಳನ್ನು ಮುಲಾಜಿಲ್ಲದೆ ತೆಗೆದುಹಾಕುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕಲಬರುಗಿಯಲ್ಲಿ ಪ್ರವಾಸ ಮಾಡಿ ಹಾನಿಯಾದ ಕುಟುಂಬಗಳಿಗೆ ಪರಿಹಾರ ನೀಡಿ ಬಂದಿದ್ದೇನೆ. ಇಂದು ಬೆಳಗಾವಿಯಲ್ಲಿಯೂ ಸಹ ಪರಿಶೀಲನೆ ನಡೆಸಲಿದ್ದೇನೆ. ಪರಿಹಾರ ಕೇಂದ್ರದಲ್ಲಿ ಸೂಕ್ತವಾದ, ಗುಣಮಟ್ಟದ ಆಹಾರ ನೀಡಬೇಕು. ಕಾಳಜಿ ಕೇಂದ್ರದಲ್ಲಿ ಯಾರೂ ಜಾತಿಯತೆ ಮಾಡದೆ ಅವರನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಹೇಳಿದರು.