ಕರ್ನಾಟಕ

karnataka

ETV Bharat / state

ತ್ರಿಬಲ್​ ರೈಡ್​ ತಂದ ಸಾವು... ರಸ್ತೆ  ಡಿವೈಡರ್​ಗೆ​ ಬೈಕ್​ಡಿಕ್ಕಿಯಾಗಿ ಮೂವರ ದುರ್ಮರಣ - ಮೂವರು ಯುವಕರು

ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ  ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್​ ರೈಡ್​

By

Published : Mar 2, 2019, 1:40 PM IST

ಚಿಕ್ಕೋಡಿ:ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್​ ರೈಡ್​

ನಿಂಗಪ್ಪ ಮುಂಜಿ (22), ಪರಶುರಾಮ ಮಾದರ (20), ಮುಬಾರಕ್ ಪಠಾಣ (25) ಮೃತರು. ಇವರು ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಮೀರಜ್​ ಪಟ್ಟಣದಿಂದ ಕೊಡಗನೂರು ಗ್ರಾಮಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದ್ದು, ಆಯಾ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನಿಂದ ಕುಟುಂಬದ ಪಾಲಕರ ನೋವು, ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಮಹಾರಾಷ್ಟ್ರದ ಮಿರಜ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details