ಕರ್ನಾಟಕ

karnataka

ETV Bharat / state

ಕುಡಿಯುವ ನೀರಿಗೆ ಆಗ್ರಹಿಸಿ ಅಥಣಿ ಬಂದ್​​​: ಬಸ್​​ ಸಂಚಾರ ಸಂಪೂರ್ಣ ಸ್ಥಗಿತ - undefined

ಕೃಷ್ಣಾ ನದಿಗೆ ನೀರು ಹರಿಸುವಂತೆ ಮತ್ತು ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸುಮಾರು 30ಕ್ಕೂ ಹೆಚ್ಚು ಸಂಘಟನೆಗಳು ಅಥಣಿ ಬಂದ್​ಗೆ ಕರೆ ನೀಡಿವೆ.

athani

By

Published : May 20, 2019, 9:24 AM IST

ಚಿಕ್ಕೋಡಿ:ಕೃಷ್ಣಾ ನದಿ ನೀರು ಹೋರಾಟಕ್ಕೆ ವ್ಯಾಪಕ ಬೆಂಬಲ ದೊರೆತಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ 30ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ.

ಕುಡಿಯುವ ನೀರಿಗೆ ಆಗ್ರಹಿಸಿ ಅಥಣಿ ಬಂದ್

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕುಡಿಯುವ ನೀರಿನ ಶಾಸ್ವತ ಪರಹಾರಕ್ಕೆ ಪ್ರತಿಭಟನೆ ಆಯೋಜಿಸಲಾಗಿದ್ದು, ಅಥಣಿ ಪಟ್ಟಣದಲ್ಲಿ ಬೆಳಗ್ಗೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡ ಪರಿಣಾಮ ಬಸ್​ನಲ್ಲಿ ಸಂಚಾರ ಮಾಡುತ್ತಿದ್ದ ರೋಗಿಗಳನ್ನು 108 ವಾಹನದಲ್ಲಿ ಕಳುಹಿಸಿಕೊಳಲಾಯಿತು. ಬೆಳಗ್ಗೆಯಿಂದಲೇ ಬಂದ್​ ಕರೆ ನೀಡಿರುವುದರಿಂದ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಸಂಪೂರ್ಣವಾಗಿ ಅಥಣಿ ಬಂದ್​ಗೆ ಕರೆ ನೀಡಲಾಗಿದ್ದು, ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

For All Latest Updates

TAGGED:

ABOUT THE AUTHOR

...view details