ಕರ್ನಾಟಕ

karnataka

By

Published : Sep 13, 2021, 7:45 PM IST

ETV Bharat / state

ಮಹಾರಾಷ್ಟ್ರದ ಕೋಯ್ನಾ ಜಲಾಶಯ ಸಂಪೂರ್ಣ ಭರ್ತಿ.. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ ನೀರು ಬಿಡುಗಡೆ..

ಸತತವಾಗಿ ಸುರಿಯುತ್ತಿರುವ ಮಳೆ ಹೀಗೆ ಇನ್ನೂ ಕೆಲ ದಿನ ಮುಂದುವರೆದರೆ ಕರ್ನಾಟಕದಲ್ಲಿ ಮತ್ತೊಮ್ಮೆ ಪ್ರವಾಹದ ಆತಂಕ ಎದುರಾಗಲಿದೆ..

Water released from Koyna Reservoir to Krishna River
ಕೃಷ್ಣಾ ನದಿ

ಚಿಕ್ಕೋಡಿ(ಬೆಳಗಾವಿ) :ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದ ಕೋಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ನಿನ್ನೆ ಸಂಜೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಸದ್ಯ 45ಸಾವಿರ ಕ್ಯೂಸೆಕ್ ನೀರು ಸೇರಿ ಒಟ್ಟಾರೆ 70 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆ ಹೀಗೆ ಇನ್ನೂ ಕೆಲ ದಿನ ಮುಂದುವರೆದರೆ ಕರ್ನಾಟಕದಲ್ಲಿ ಮತ್ತೊಮ್ಮೆ ಪ್ರವಾಹದ ಆತಂಕ ಎದುರಾಗಲಿದೆ.

ಓದಿ:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ದಡ ಸೇರಿ ಲಂಗರು ಹಾಕಿದ ನೂರಾರು ಬೋಟ್​​​​​​ಗಳು

ABOUT THE AUTHOR

...view details