ಕರ್ನಾಟಕ

karnataka

By

Published : Dec 6, 2022, 3:02 PM IST

ETV Bharat / state

ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಸವಾಲು ಹಾಕಿದ ಶಿವಸೇನೆ

ತಾವು ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಹೇಳಿಕೆ ನೀಡಿದ್ದಾರೆ.

Belagavi update
Belagavi update

ಬೆಳಗಾವಿ: ಗಡಿ ತಿಕ್ಕಾಟ ತೀವ್ರಗೊಂಡಿದೆ. ಇದರ ಮಧ್ಯೆ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮುಂದಾದ ಮಹಾರಾಷ್ಟ್ರದ ಶಿವಸೇನೆ ಉದ್ಧವ್ ಠಾಕ್ರೆ ಬಣ ಇಂದು ಸಂಜೆ 5 ಗಂಟೆಗೆ ಬೆಳಗಾವಿಯ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರೋದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸವಾಲು ಹಾಕಿದೆ.

ಮಹಾರಾಷ್ಟ್ರ ಸಚಿವರ ಬೆಳಗಾವಿ ಪ್ರವಾಸ ರದ್ದು ಮಾಡಿದ್ದರಿಂದ ಕ್ಯಾತೆ ತೆಗೆದಿರುವ ಉದ್ಧವ್ ಠಾಕ್ರೆ ಬಣದ ಮುಖಂಡ ಹಾಗೂ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಕರ್ನಾಟಕ ಗಡಿ ಪ್ರವೇಶಕ್ಕೆ ಮುಂದಾಗಿದ್ದಾರೆ. ಇವರ ಈ ಹೇಳಿಕೆಯು ಗಡಿ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಗೆ ದಾರಿ ಮಾಡಿಕೊಟ್ಟಿದೆ.

ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ

ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರು ಎರಡೂ ಬಾರಿ ಬೆಳಗಾವಿ ಪ್ರವಾಸ ರದ್ದು ಮಾಡಿದ್ದಾರೆ. ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವದ್ವಯರ ನಿಲುವು ಸಂಶಯಾಸ್ಪದವಾಗಿದೆ. ಹೀಗಾಗಿ ಸಂಜೆ 5 ಗಂಟೆಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುತ್ತೇವೆ. ಟೋಲ್‌ಗೇಟ್ ಬಳಿ ಬಂದು ತನ್ನ ನಿಲುವು ತಿಳಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಪ್ರವೇಶಕ್ಕೆ ಕನ್ನಡಪರ ಹೋರಾಟಗಾರರಿಗೆ ಪೊಲೀಸರ ತಡೆ.. ಗಡಿಯಲ್ಲಿ ಹೆಚ್ಚಿದ ತಿಕ್ಕಾಟ

ABOUT THE AUTHOR

...view details